ಕವಿ

ಯೋಜನಗಳಾಚೆಯೊಳು ಎಲ್ಲಿಯೋ ಜನಿಯಾಂತು
ಮಿಂಚಿನಣುಗಳನೇರಿ ಸಕಲ ದಿಙ್ಮಂಡಲವ
ಸಂಚರಿಸುತಂತರದಿ ಮೌನದಿಂ ಮಿಡಿಯುತಿಹ
ಸೋಜಿಗದ ಗೀತವನ್ನು ಹಿಡಿದು, ಉಜ್ಜ್ವಲಗೊಳಿಸಿ,

ಶ್ರೋತೃಪಥವೈದಿಸುವ ಯಂತ್ರದೊಲು,-ಹೇ ಕವಿಯೆ,
ಬಾಳುಬಾಳುಗಳಾಚೆ ಬ್ರಹ್ಮಾಂಡ ಹೃದಯಾಂತ-
ರಾಳದೊಳು ಸಂತತಂ ಸಂಜನಿಸುವಾನಂದ-
ಮಾತೃಕೆಯೆ ತಾನಾದ, ವಿಶ್ವ ಕೆಲ್ಲಕು ಹರಡಿ

ವಿಕೃತಿ ಪದರಗಳಲ್ಲಿ ಮೌನವಾಗಿಹ, ಶಿವದ
ಗೀತವನು ಕರಣಗೋಚರಮಾಗೆ ಸ್ಪಂದಿಸುತ
ಚೇತನರೊಳಾ ಚಿದಾನಂದವನೆ ಮರುಕೊಳಿಪ,
ಪ್ರಕೃತಿ ಶಿಲ್ಪಿಯು ಸಮೆದ ಚಿದ್ಯಂತ್ರ ನೀನಲಾ!

ಮನದ ಮೊನೆಯನು ಮಾಡು ಶಿವಸೂಚಿಯಾಗುವಂತೆ;
ಮರ್ಮವನು ನುಡಿ, ಲೋಕ ತನ್ನ ತಾನರಿಯುವಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಂಗ್ಯಾನ ಹಾಡು
Next post ರಾಮನೇನು ಗೊತ್ತು

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys