ಸಾವು

ಪ್ರಿಯ ಸಖಿ,
ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ
(ಸಾನೆಟ್)

ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು
ನೋವಿನೋಲುಗ ಜೀವದಾಧಿಕ್ಯಗೋಳು

ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ ಹೆಸರಲ್ಲಿ ಸತ್ತ, ಆತ್ಮಹತ್ಯೆಗೊಳಗಾದ, ಅಪಘಾತದಿಂದ ಸತ್ತ ವ್ಯಕ್ತಿಯ ಇಂತಹ ಅಸಹಜ ಸಾವಿಗಾಗಿ ಆಗುತ್ತದೆ. ಇಂತಹ ಸಾವಿಗಾಗಿ ಮರುಗುತ್ತಾ ಕವಿ,

ಯಾರ ಹಸಿವಿಂಗಿಸಲು, ಯಾರ ಮದ ಭಂಗಿಸಲು
ಕೂರಲಗ ಕತ್ತಿಯಲಿ ನೆತ್ತರಿನ ಭುಗಿಲು?

ಎಂದು ಪ್ರಶ್ನಿಸುತ್ತಾರೆ. ಇಂತಹ ಅಸಹಜ ಸಾವುಗಳಿಗೆ ಕಾರಣವಾದರೂ ಏನು? ಎನ್ನುತ್ತಾ,

ಕಾವ ಕರುಣೆಯ ನಯದ ತೋಳ ತೊಂಗಲಿನಲ್ಲಿ
ಜೀವ ದುಂಬಿಯ ಆಟ

ಎಂದು ವಿಷಾದಿಸುತ್ತಾರೆ. ಕಾಯುವ ಕರುಣೆಯನ್ನು ನಂಬಿ ನೆಮ್ಮದಿಯಾಗಿರುವಾಗ ಕೊಲ್ಲುವಾಟವ ಆಡುವ ಈ ಆಳ್ವಿಕೆಗೆ ಉತ್ತರವೆಲ್ಲಿದೆ ? ಎನ್ನುತ್ತಾ, ಪದ್ಯದ ಕೊನೆಯಲ್ಲಿ

ಕೊಲೆಯು ಜೀವದ ಕೊನೆಯೆ! ಬಾಳು ಸಾವಿನ ಆಳೆ!
ಜಗದ ಸೌಂದರ್ಯದಂತಕನ ಸೂಳೆ!

ಎಂದು ಮಾರ್ಮಿಕವಾಗಿ ನುಡಿಯುತ್ತಾರೆ. ವಿಶೇಷ ಮಾನವ ಜನ್ಮ ಪಡೆದು ತನ್ನ ಜೀವನದ ಅಲ್ಪ ಭಾಗವನ್ನು, ಅನುಭವಿಸಿರದಾಗ ಕೊಲೆಯೇ ಜೀವದ ಕೊನೆಯಾಗಬೇಕೆ? ಈ ಬಾಳೆಂಬುದು ಸಾವು ಹೇಳಿದಂತೆ ಕೇಳುವ ಆಳಾಗಬೇಕೆ? ಎನ್ನುತ್ತಾ ಜಗತ್ತಿನ ಸೌಂದರ್ಯವೆನ್ನುವುದು ಅಂತಕ ಬೇಕೆನ್ನುವಂತೆ ಕುಣಿಸುವ,
ಕೊನೆಗಾಣಿಸುವ ಸೂಳೆಯೆ? ಎಂದು ಪ್ರಶ್ನಿಸುತ್ತಾರೆ. ಹೌದು ಅಸಹಜ ಸಾವನ್ನು ತಡೆಯಲು ಇಲ್ಲಿ ಯಾರಿಗೂ ಸಾಧ್ಯವಿಲ್ಲ. ಇಂತಹ ಅಸಹಜ ಸಾವಿಗೆ ಆ ಅಂತಕ
ಉತ್ತರ ಕೊಡಬಲ್ಲನೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೧೮
Next post ಚಂದ್ರ ಆಗೋದು ಸಾಧ್ಯವಿಲ್ಲ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys