ಮುಂಗಾರು

ಮುಂಗಾರು ನನ್ನ ಮುಂದಾರೆಂಬ ಬಿಂಕದಲಿ
ಮುಂದಲೆಯ ಕೇಶರಾಶಿಯನೆತ್ತಿ ಕಣ್ಕಿಸಿದು,
ಎಬ್ಬಿಸಿದ ಕೆಂಧೂಳಿ ಕಾರ್‍ಮುಗಿಲ ಮುಟ್ಟಲದು
ರಕ್ಕಸಿಯ ರಕ್ಕಸದಿ ನಿಂತಿದೆ ದಿಗಂತದಲಿ
ಮುಂಗಾರ ಸಿಂಗಾರವಿದು ನಿರಾತಂಕದಲಿ
ಮುಚ್ಚಿಹುದು ಹಗಲ ಬಂಗಾರವನು ಬೆಚ್ಚಿಹುದು
ಮುಂಗಾರ ಸಿಡಿಲು-ಮಿಂಚನು ಮೊದಲುಸಲ ಕಂಡು
ಮಗುವೊಂದು ನಿದ್ದೆ ತೊಲಗಿರೆ ಮಾತೆಯಂಕದಲಿ

ಮರುಕ್ಷಣವೆ ನಗುತಿಹುದು ಓ! ಎಲ್ಲ ಬಯಲಾಗಿ
ಕೊನರಿತ್ತು ರವಿಯ ನಗೆ. ಪ್ರೀತಳು ಧರಾಂಗನೆಯು.
ಅಲ್ಲಲ್ಲಿ ನಿಂತ ಕಿರಿಗೊಳದಿ, ನವ ಮಾಸಗಳು
ಮಾಸಿರುವ ಮೈಯ್ಯ ತೊಳೆವವು ಹಕ್ಕಿ, ನೆರೆಯಾಗಿ
ತಂಪು-ಬರುತಿದೆ ಕಂಪು: ಶಾಂತ ಮೌನದ ಮುಗುಳು
ಬಿಚ್ಚಿಹುದು ಮುಂಗಾರು ಇಂಥ ಸೊಬಗಿನ ನನೆಯು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುದ್ದು ಕಂದನ ವಚನಗಳು: ಎರಡು
Next post ಗಾಜಿನ ಅರಮನೆ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…