ಅವತಾರಿ ಬರುತ್ತಾನೆ

ಅವನು ಬರುತ್ತಾನೆ
ಮಾತುಗಳ ಮಾಲೆಹಾಕಿಕೊಂಡು ಮೌನದ ಬೇಲಿ ಸುತ್ತಿಕೊಂಡು
ತನ್ನ ಪರಾಕು ಪಂಪ ತಾನೇ ಒತ್ತಿಕೊಳ್ಳುತ್ತ ಅಥವಾ ಒತ್ತಿಸಿಕೊಳ್ಳುತ್ತ
ತಲೆ ನಿಗುರಿಸಿ ಎದೆ ಉಬ್ಬಿಸಿ ಬಿಮ್ಮನೆ ಬೀಗಿ ಬರುತ್ತಾನೆ
ಮಾತಿನ ಹೊಳೆಯಲ್ಲಿ ಮಂತ್ರ ಮಹಾರಾಜರ ತೇಲಿಸಿ ಮುಳುಗಿಸುತ್ತ
ಬಾಯ ಒರಳಲ್ಲಿ ಹಿರಿಯರನರೆದಾಡುತ್ತ

ಹಲ್ಲ ತೀಟೆಯಲ್ಲಿ ಕಿರಿಯರ ಕೊರೆದು ಸಣ್ಣ ಮಾಡುತ್ತ
ಮೂಗಿನ ನೇರಕ್ಕೆ ಜಗವನಳೆದು ಸೀನಿ ಸುರಿಯುತ್ತ
ಬಡಾಯಿ ಬಾಹುಗಳ ಉದ್ದಗಲಗಳಿಗೆ ಚಾಚಿ ತಬ್ಬಿ
ಹೂಟ್ಟೆಯುಬ್ಬರ ತೋರುತ್ತ ತನ್ನಪ್ಪನೊಬ್ಬನೇ ಪರಮ ಪುರುಷ
ತನ್ನವಗವಳೊಬ್ಬಳೇ ಜಗಮೀರಿದ ಗರತಿ ಎನುತ್ತ

ತನ್ನ ವಂಶ ವೃಕ್ಷಕ್ಕೆ ಅನಾದಿ ಬೀಜದ ಪಾವಿತ್ರ್ಯ ತೋರುತ್ತ
ಹಗಲಿನ ಮುಖಕ್ಕೆ ಕೊಳ್ಳಿ ತೋರಿಸುತ್ತ
ವಿಶ್ವಗೂಢತೆಯ ರೋಮರೋಮಗಳಲ್ಲಿ ತುಂಬಿಕೊಂಡು
ತಾನು ಕುಡಿದೊಂದೆರಡು ಬಾವಿಗಳಲ್ಲಿ ಸಾಗರಗಳ ಮುಕ್ಕಳಿಸುತ್ತ
ತನ್ನ ಬಾಯಲ್ಲೀರೇಳು ಲೋಕಗಳ ಬಿಂಬಿಸಿ
ಕೃಪಾಪೋಷಕ ನಗೆಯಿಂದ ಜಗವ ಪಾವನಗೊಳಿಸಿ

ನಮ್ಮನು ಉದ್ಧರಿಸುಲು ಬರುತ್ತಾನೆ
ಬಂದು ನಿಂತು ಜಗದಗಲ ಮುಗಿಲಗಲವಾದ
ತನ್ನುದರದಡಿಯಲ್ಲಿ ನಮಗೆ ಕಾವು ಕೊಡುತ್ತಾನೆ
ಬೆಚ್ಚಗಿದೆಯೆಂದು ನಾವು ಆಶ್ರಯ ಪಡೆದೆವೋ ಸರಿ
ಕಪ್ಪ ನೆರಳಪುಟ್ಟಿ ನಮ್ಮ ಮುಚ್ಚಿ
ಉಸಿರುಕಟ್ಟಿ ನಾವು ಮೂಕರಾಗಿ
ಬಿಳಿಚಿಕೊಂಡು ಬೆಪ್ಪರಾದರೆ ಅವನ ತಪ್ಪೇ?

ನೋಡು ಅವನು ಬಂದೇ ಬರುತ್ತಾನೆ
ಬಿಡಿಸಿಕೊಳ್ಳಲು ನೀನು ಯತ್ನಿಸಿದಂತೆಲ್ಲಾ
ಪರಲೋಕಕೇರುವ ಪರಿಪೂರ್ಣ ಪವಾಡದೇಣಿಯಿಂದಾದರೂ
ನಿನ್ನ ಸೆಳೆದು ತನ್ನ ಸುತ್ತಲೇ ಜೇಡನಂತೆ ತಿರುಗಾಡಿಸುತ್ತಾ
ಕೊನೆಗೆ ನಿನ್ನ ನುಂಗಿ ನೀರು ಕುಡಿಯುತ್ತಾನೆ
ಸೋಹಮ್ಮೆಂದು ನಿನ್ನ ಸೊನ್ನೆಯಾಗಿಸುತ್ತಾನೆ
ನೀನು ನೀನಾಗುಳಿಯಬೇಕೆಂದರೆ ದೂರ ಓಡು
ಅಗೋ ಬಂದ! ಬಂದೇ ಬರುತ್ತಾನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಳಿಯನ ಅರ್ಹತೆ
Next post ಅನನ್ಯ ಹೇಮೆ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

cheap jordans|wholesale air max|wholesale jordans|wholesale jewelry|wholesale jerseys