ಹೊಟ್ಟೆಪಾಡು

ಇನ್ನೂ ಅರ್ಥಾಗಲಿಲ್ಲೇನ್ನಿನ್ಗೆ?
ನಾಕಕ್ಸರಾ ಬಾಯಾಗಿಟಗಂಡು ನಾಕ ಸಾಲು ತಲಿಯಾಗಿಟಗಂಡು
ನಾಕ ಕಾಸು ಕೈಯಾಗಿಟಗಂಡು ಯಾಕ ಮೆರೀತಿಯಲೇ!
ಬಾಯಾಗೇ ಅಂತ್ರಕ್ಕೇಣೀ ಹಾಕಿ
ಸಮತಾ ಸೋದರತಾ ಗಾಂಧೀತಾತಾ ಅಂತಾ
ಒಳ್ಳೇ ನಾಣ್ಣೆಗಳನ್ನ ಒದರಿ ಒದರಿ ಒಡಕು ಬೋಕೀ ಮಾಡಿಟ್ಟಿ
ಗುಂಪು ಸೇರ್ಸಿ ಶಂಖಾ ಊದಿದ್ರೆ ಕೇಳಾವ್ರ್ನ ಸೋಡಾವ್ರ್ನ
ಕುರಿಗಳ ಮಾಡೀಯೇನ್ಲೇ!
ನಿನ ತಲಿ ದೊಡ್ಡದಿರಭೌದು ಲೇ ಕೈಕಾಲ್ಸಣ್ಯಾ
ಆದರೆ ದುಡಿಯೋದೀ ತೋಳು ನೆನಪಿರ್ಲಿ
ಅನ್ನಾ ಮೊದಲು ಹೋಗಬೇಕು ಹೊಟ್ಟಿಗೆ
ಅಲ್ಲಿಂದ ಜೀರ್ಣಾಗಿ ರಗತಾಗಿ ಹರೀಬೇಕೆಲ್ಲಾ ಕಡಿಗೆ
ತಲಿಗೂ ಕೂಡಾ
ನಾ ಮಾತನಾಡದೇ ಇರಭೌದು
ಆದ್ರೆ ಒಮ್ಮೆಗೇ ಮಾಡಿ ತೋರಿಸ್ತೀನಿ
ಎಚ್ಚರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಷ್ ! ಸದ್ದು!
Next post ರೆಡ್ಡಿ ಸೋಲಿಲ್ಲ, ಸುಸ್ಮಕ್ಕ ಗೆಲ್ಲಿಲ್ಲ, ವರಮಹಾಲಕ್ಷ್ಮಿ ವರ ನೀಡ್ಲಿಲ್ಲ.

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

cheap jordans|wholesale air max|wholesale jordans|wholesale jewelry|wholesale jerseys