ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು ತಾವರೆಯ ತೆನೆಯಾಗಿ
ಹೂವಾಗಲಿಲ್ಲ ಕೆಂಪಾಗಿ.
ಸಾವಿನಲಿ ಶಾಂತಿ ಉರುಳಿತ್ತು ತಲೆಕೆಳಗಾಗಿ
ಆ ಎಲ್ಲ ನೋವು ತಂಪಾಗಿ.

ನೀರಿಗೆ ಬಿದ್ದ ಹೆಣ್ಣು ಒಂದೇ ಮುಳುಗು ಮುಳುಗಿ
ಕಂಡಿತ್ತು ಸಾವಿನ ಯುಗಾದಿ.
ಸುತ್ತೆಲ್ಲ ಕಿತ್ತು ಬಿದ್ದಿತ್ತು ಆಸೆಯ ಜೋಲಿ
ತೆರೆದಿತ್ತು ಹುಡಿಮಣ್ಣು ಹಾದಿ.

ನೀರಿಗೆ ಬಿದ್ದ ಹೆಣ್ಣು ಯಾರಿಗೂ ಹೇಳದೆಯೆ
ಆಗಿತ್ತು ಕೆರೆಗೆ ಆಹುತಿ.
ಹಾಲ ಕಾಣದ ಬದುಕು ಕುಡಿದಿತ್ತು ಕೆರೆಯನೆ;
ಅಲ್ಲಿತ್ತು ಅದರ ಸದ್ಗತಿ.

ಗಂಡ ಬಂದನು ಕಡೆಗೆ ನಡೆಬಂದ ಕಂಬದೊಲು;
ಹತ್ತು ಜನ ಅಲ್ಲೆ ಒದಗಿದರು.
ಬೆಂಕಿ ಹೆಣವನು ನುಂಗಿ ಬೆಂಬೂದಿಯಾಗಿರಲು,
ಉಳಿದವರು ಊರ ಸೇರಿದರು.

ನೀರು ಮುಗಿಸಿದ ಕಥೆಗೆ ಬೆಂಕಿ ಮಂಗಳ ಹಾಡಿ
ನಡೆದಿತ್ತು ದೈವ ಸಂಕಲ್ಪ.
ಇಂಥ ಬಾಳಿಗೆ ಸಾವೆ ನಂದನದ ಕೆರೆ-ಕೋಡಿ;
ಮಸಣದಲಿ ಮಾತ್ರ ಸುಖತಲ್ಪ.

ಹೆಣ್ಣು ಸತ್ತಳು ಏಕೆ? ನೆರೆಯ ನಿರ್ಭಾಗ್ಯರಿಗೆ
ಸಂಶಯದ ಮೇಲೆ ಸಂಶಯ.
ಕಾರಣದ ಬಂಗಾರ ಬೇಟೆ ಫಲಿಸದೆ ಕಡೆಗೆ
ಸತ್ತವಳ ಮೇಲೆ ಸಂಶಯ.

ಕಯ್ಯಾರ ಕೆರೆಗೆ ತಳ್ಳಿದನೆ ಮಡೆದಿಯನಿವನು?
ನ್ಯಾಯದಲಿ ತೀರ್ಪು: ನಿರ್ದೋಷಿ.
ಗದ್ದಲದ ಗಡಸು ನಾಲಗೆಯ ಗಂಡಲ್ಲಿವನು;
ಊರು ಕಂಡಂತೆ ಮಿತಭಾಷಿ.

ಸತ್ತವಳ ಮೇಲೆ ಸಂಶಯ -ಊರಿಗಿವನಂಥ
ಮಾದರಿಯ ಗಂಡ ಆಭರಣ.
ಸತ್ತವಳು ಇಳಿದು ಸತ್ಯವನೊದರುವಂತಿಲ್ಲ ;
ಸಂಗತಿಗೆ ಮೌನದಾವರಣ.

ನೀರಿಗೆ ಬಿದ್ದ ಹೆಣ್ಣ ಗಂಡನ ಹಣೆಯ ಮೇಲೆ
ಬಿಡುಗಡೆಯ ನಿರ್ಭಯದ ತಿಲಕ.
ಎದೆಯಲಿ ಏನೊ ಎಂತೊ, ತೋರುವ ಮುಖದ ಮೇಲೆ
ಎಷ್ಟೊಂದು ನೋವು, ನಾಟಕ!

ಸತ್ತಳು ಏಕೆ ಹೆಣ್ಣು (ಊರಿಗೆ ಇಲ್ಲ ಕಣ್ಣು):
ಅಂತು ಕೇಳಿದವನೊಬ್ಬ ಕುಂಟ.
ಸತ್ತರೆ ಏನು ನಷ್ಟ? ಕಾದಿದೆ ಬೇರೆ ಹೆಣ್ಣು;
ಇಂತು ಹೇಳಿದನೊಬ್ಬ ನಂಟ.

ಕನಿಕರದಿಂದ ಬಂದ ಕುರಿಯೊಂದು ನುಡಿದಿತ್ತು :
ಮುಂಗಿದಿತ್ತು ಹೆಣ್ಣ ಹಣೆ-ಬರಹ.
ಮಾನವ ಜನ್ಮಧಾರಿ ನರಿಯೊಂದು ನಕ್ಕಿತ್ತು :
ನೀರಿಗೆ ಜಾರಿ ಬಿದ್ದ ವಿಷಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಮ್ಮೆ ಹಾಡಿದ ಹಾಡು
Next post ಮನಕೆ ಕನ್ನಡಿಯಾದರೆ……

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys