ಶಿವಪಾರ್ವತಿಯರ ಸೋಲು

ಕುರುಬ ಬೀರನು ಕುರಿ ಕಾಯುತ್ತ ಒಂದು ಹಳ್ಳದ ದಂಡೆಗೆ ಬಂದನು. ಅಲ್ಲಿಯ ನೀರು ನೆರಳು ನೋಡಿ, ಕುರುಬನು ತನ್ನ ಕುರಿಗಳಿಗೆ ದಡ್ಡಿಹಾಕಲು ತಕ್ಕ ಸ್ಥಳವೆಂದು ಬಗೆದನು. ಅದರಂತೆ ದಡ್ಡಿಹಾಕಲು ತೊಡಗಿದನು.

ಅಷ್ಟರಲ್ಲಿ ಅತ್ತಕಡೆಯಿಂದ ಶಿವಪಾರ್ವತಿ ಬಂದರು. “ಇಲ್ಲೇಕೆ ದಡ್ಡಿ” ಎಂದು ಕೇಳಿದರು.

“ಅದಕ್ಕೇನೂ ಆಗುವದಿಲ್ಲ” ಎಂದನು ಬೀರನು.

“ಮಳೆ ಆಗಿಬಿಟ್ಟರೆ ಹಳ್ಳಕೊಳ್ಳ ತುಂಬಿ ಬರುವದಿಲ್ಲವೇ?” ಎಂದು ಶಿವ ಪಾರ್ವತಿ ಕೇಳಿದರು.

“ಮಳೆ ಹೋಯಿತು ತನ್ನ ನಾಡಿಗೆ ಮೂರು ತಿಂಗಳು” ಎಂದು ಬೀರನು ಅವರಿಗೆ ಮರುನುಡಿದನು.

ಶಿವಪಾರ್ವತಿಯರು ಅಲ್ಲಿ ನಿಲ್ಲದೆ ಹೋಗಿಬಿಟ್ಟರು. ಅವರು ನೇರವಾಗಿ ವರುಣನ ಲೋಕಕ್ಕೆ ತೆರಳಿ – “ಈಗಲೇ ಮಳೆರಾಯನನ್ನು ಕಳಿಸಿಕೊಡು” ಎಂದು ಹೇಳಿದರು.

“ಮಳೆರಾಯನನ್ನು ಬೇರೆ ನಾಡಿಗೆ ಕಳಿಸಿದ್ದೇನೆ. ಅವನು ಬರುವುದು ಮೂರು ತಿಂಗಳು ಕಳೆದ ಬಳಿಕ” ಎಂದು ವರುಣನು ತಿಳಿಸಿದನು.

ಆ ಮಾತು ಕೇಳಿ ಶಿವಪಾರ್ವತಿಯರ ಮುಖ ಬಾಡಿಹೋದವು. ಮರುನುಡಿಯದೆ ಅವರು ಕೈಲಾಸಕ್ಕೆ ಹೊರಟುಹೋದರು.

ಬೀರನ ದಡ್ಡಿ ಹಳ್ಳದಲ್ಲಿ. ಅವನ ಕುರಿಗಳು ಹಳ್ಳದ ದಂಡೆಯಲ್ಲಿ ಬೀಡುಬಿಟ್ಟು ತಂಗಿದವು. ಹಳ್ಳದ ದಡದಲ್ಲಿ ಬೆಳೆದು ನಿಂತ ಹುಲ್ಲು ಮೇದು ಹಳ್ಳದ ನೀರು ಕುಡಿಯುತ್ತ ಮೂರು ತಿಂಗಳು ಕಳೆದವು.

ಆ ಸಂದರ್ಭದಲ್ಲಿ ಅತ್ತ ಕಡೆಯಿಂದ ಶಿವಪಾರ್ವತಿಯರು ಬಂದರು. ಕೇಳಿದರು – “ಬೀರಾ, ದಡ್ಡಿ ಕಿತ್ತಿದೆಯಲ್ಲ ! ಯಾಕೆ ?” “ಮಳೆರಾಜ ಬಂದಿರುವನಲ್ಲವೇ ನಮ್ಮ ನಾಡಿಗೆ” ಇದು ಬೀರನ ಮರುನುಡಿ. “ಎಷ್ಟು ಸೊಕ್ಕು ಈ ಕುರುಬನಿಗೆ ? ಮಳೆ ಬರುವದೆಂದು ಸ್ಪಷ್ಟವಾಗಿ ಹೇಳುತ್ತಿರುವನಲ್ಲ! ಏತರ ಮೇಲಿಂದ ಹೇಳುತ್ತಾನೆ ಹೀಗೆ ?” ಎಂದು ಶಿವಪಾರ್ವತಿ ತಮ್ಮತಮ್ಮಲ್ಲಿಯೇ ಅಂದುಕೊಂಡು, ನೇರವಾಗಿ ದೇವಲೋಕಕ್ಕೆ ನಡೆದರು. ಅಲ್ಲಿ ವರುಣನ ಬಳಿಗೆ ಹೋಗಿ ಹೇಳಿದರು – “ಮಳೆರಾಯನನ್ನು ಮರಳಿ ಕರೆಯಿಸು.”

ವರುಣ ಬಿನ್ನಯಿಸಿದನು – “ಆ ಹೊತ್ತು ನೀವು ಸೂಚಿಸಿದಂತೆ ಆತನನ್ನು ಇಂದೇ ಅತ್ತಕಡೆ ಕಳಿಸಿದ್ದೇನೆ. ಮೋಡಗಳು ಮುಂದೆ ಮುಂದೆ, ಸಿಡಿಲು ಮಿಂಚುಗಳು ಹಿಂದೆ ಹಿಂದೆ ಹೋಗಿವೆ. ನನ್ನ ಕೈಯಲ್ಲಿ ಏನಿದೆ ? ಕೊಟ್ಟ ಹುಕುಮು ಅವರ ಕೈಯಲ್ಲಿದೆ.”

ಆ ಮಾತು ಕೇಳಿ ಶಿವಪಾರ್ವತಿಯರು ಅಂದುಕೊಂಡರು – “ನಾವಿಂದು ಕುರುಬನಿಗೆ ಸೋತೆವು.”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಘವೇಂದ್ರ ಭಾರತಿ ಅಂಬೋ ಆಸಾಮಿಗೆ ಬಡಿದ ಗೋ-ಗ್ರಹಣ
Next post ಬಿಜೆಪಿ ಎಂಬ ಶಬರಿಯೂ ಕೊಮಾರನೆಂಬ ರಾಮನೂ…

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys