ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು ಹತ್ತಿ ನಡೆಯಿಸತೊಡಗಿದರೆ ಕುದುರೆಯ ಬೆನ್ನು ಬಾಗಿ ಬಿಲ್ಲಾಗುತ್ತಿತ್ತು.

ಕೊರಕಲಮಟ್ಟಿಗೆ ಬರುವುದಕ್ಕೆ ಯಾವ ದಾರಿಯೂ ಅನುಕೂಲವಾಗಿಲ್ಲ. ನಡೆಯುತ್ತಲೇ ಬರಬೇಕು. ಇಲ್ಲವೆ ಕುದುರೆ ಹತ್ತಿ ಬರಬೇಕು. ಜಾಫರಖಾನ ಫೌಜದಾರರು ಕುದುರೆ ಸಾಕಿದ್ದರಿಂದಲೇ ಕೊರಕಲಮಟ್ಟಿಗೆ ಬರಲು ಸಾಧ್ಯವಾಯಿತು.

ಬೆಳಗಾಗುವ ಹೊತ್ತಿಗೆ ಚಾವಡಿ ಮುಂದಿನ ಕುದುರೆಯನ್ನು ಬಿಚ್ಚಿಕೊಂಡು ಓಲೆಕಾರನು ಮುಂದೆ ಸಾಗಿದನು. ಅಗಸೆಯ ಹೊರಗಿರುವ ಹನುಮಪ್ಪನ ಹಾಳು ಗುಡಿಯ ಕಲ್ಲುಡಿಗ್ಗೆಯ ಬಳಿಯಲ್ಲಿ ನಿಲ್ಲಿಸಿದನು. ಏಳುಗೇಣಿನ ಕುದುರೆಯಾದ್ದರಿಂದ ಮೇಲೆ ಹತ್ತುವವರಿಗೆ ಆನುಗಲ್ಲು ಅಥವಾ ಕಟ್ಟೆ ಅವಶ್ಯವಾಗಿ ಬೇಕು.

ಗುಡಿಯ ಮಗ್ಗುಲಿಗೆ ಅಸ್ತವ್ಯಸ್ತವಾಗಿ ಬಿದ್ದ ಕಲ್ಲುಗಳಲ್ಲಿ ಒಂದನ್ನೇರಿ ನಿಂತು ಕುದುರೆಯನ್ನು ಜಿಗಿದು ಹತ್ತಿದರು. ಆ ಇಸಲಿಗೆ ಕಾಲಕೆಳಗಿನ ಕಲ್ಲು ಉರುಳಿಬಿತ್ತು. ಗೌಡ ಓಲೆಕಾರರು ಮಾಡಿದ ಮುಜುರೆಯನ್ನು ಸ್ವೀಕರಿಸುತ್ತ ಫೌಜದಾರರು ಕುದುರೆಯನ್ನು ಓಡಿಸಿದರು.

ಅಂದು ರಾತ್ರಿ ಊರಗೌಡರ ಕನಸಿನಲ್ಲಿ ಹನುಮಪ್ಪನು ಕಾಣಿಸಿಕೊಂಡು ಅವನನ್ನು ಗಟ್ಟಿಯಾಗಿ ಹಿಡಿದನು.

“ಏಕೆ ದೇವಾ, ಕನಸಿನಲ್ಲಿ ದರ್ಶನಕೊಟ್ಟಿರಲ್ಲ” ಎಂದು ವಿನಯದಿಂದ ಗೌಡ ಕೇಳಿದನು.

“ಗೌಡ, ಒಳ್ಳೆಯ ಮಾತಿನಿಂದ ಎಣ್ಣೆ ಮಜ್ಜನ ಮಾಡಿಸುವೆಯೋ ಇಲ್ಲವೋ ನಿನ್ನ ಕುತ್ತಿಗೆ ಹಿಸುಕಲೋ?” ಎಂದನು ಹನುಮಪ್ಪ. “ನನ್ನ ಮೇಲೇಕೆ ಸಿಟ್ಟು ದೇವಾ? ನಾನಾವ ಅಪರಾಧ ಮಾಡಿದೆ?”

“ನನ್ನ ಸೊಂಟ ನೋವಾಗಿದೆ.”

“ಸೊಂಟ ನೋವು ಏಕಾಯಿತು ?” ಗೌಡನ ಪ್ರಶ್ನೆ.

“ಬಂದಿದ್ದನಲ್ಲ ನಿಮ್ಮ ಫೌಜುದಾರ. ತನ್ನೂರಿಗೆ ಹೋಗುವಾಗ ಕುದುರೆ ಹತ್ತುವ ಮು೦ದೆ ನನ್ನ ಮೇಲೆ ಕಾಲಿಟ್ಟು ನೆಗೆದು ಕುದುರೆ ಹತ್ತಿದನು. ಆ ಇಸಲಿಗೆ ಸೊಂಟ ನೋವು ಆಗಿದೆ” ಹನುಮಪ್ಪನ ವಿವರಣೆ.

“ಆ ಫೌಜದಾರನನ್ನು ಬಿಟ್ಟು ನನ್ನನ್ನೇಕೆ ಹಿಡಿದಿರಿ ದೇವಾ?”

“ಯಾರನ್ನು ಹಿಡಿಯಲಿ ? ಫೌಜದಾರನು ನನ್ನ ಭಕ್ತನೇ ? ಭಕ್ತರನ್ನು ಬಿಟ್ಟು ಅನ್ಯರನ್ನು ನಾನೇಕೆ ಹಿಡಿಯಲಿ” ಹನುಮಂತದೇವರ ಸ್ಪಷ್ಟೀಕರಣ. “ಬೆಳಗಾಗುತ್ತಲೆ ಎಣ್ಣಿ ಮಜ್ಜನ ಮಾಡಿಸುತ್ತೇನೆ. ತಾಳು ದೇವ” ಎಂದು ಗೌಡನು ಕಾಲಿಗೆರಗಲು ಹನುಮಪ್ಪನು ಅವನನ್ನು ಬಿಟ್ಟುಕೊಟ್ಟನು.

ಕನಸಿನಲ್ಲಿ ಮಾತುಕೊಟ್ಟ ಪ್ರಕಾರ ಗೌಡನು, ಮಗಿ ಎಣ್ಣೆ ತರಿಸಿ ಹನುಮಪ್ಪ ದೇವರಿಗೆ ಎಣ್ಣೆ ಮಜ್ಜನ ಮಾಡಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೭೩
Next post ಸಂಧಿ

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys