ಉದ್ದನ್ನವರ ಮುಂದೆ ಕೀರ್ತನ

‘ಊರಿಗೆ ಬಂದ ಪ್ರಖ್ಯಾತ ಕೀರ್ತನಕಾರನೊಬ್ಬನ ಕೀರ್ತನ ಮಾಡಿಸಬೇಕೆಂದು, ಪ್ರಮುಖರು ಎತ್ತುಗಡೆ ನಡೆಯಿಸಿದರು. ಕೀರ್ತನಕಾರನು ಮೊದಲೇ ಸೂಚಿಸಿದಂತೆ ಶ್ರೋತೃವೃಂದಲ್ಲಿ ಕುಳಿತ ಗಿಡ್ಡಗಿಡ್ಡ ಜನರನ್ನೆಲ್ಲ ಎಬ್ಬಿಸಿ ಕಳಿಸಲಾಗಿತ್ತು. ಕುಳಿತವರೆಲ್ಲರೂ ಉದ್ದನ್ನವರೇ ಆಗಿದ್ದಾರೆಂಬ ಭರವಸೆಯಾದ ಬಳಿಕ ಕೀರ್ತನಕಾರನು ತನ್ನ ಅಮೋಘವಾಣಿಯಿಂದ ಕೀರ್ತನ ಹೇಳಲು ಪ್ರಾರಂಭಿಸಿದನು.

ಸ್ತೋತ್ರವಾಯಿತು. ಉಪೋದ್ಘಾತ ಮುಗಿಯಿತು. ಮುಖ್ಯಕಥೆ ಮುಗುಳಿ ಮುಂದುವರೆಯಿತು. ಅಷ್ಟರಲ್ಲಿ ಸಂದರ್ಭಾನುಸಾರವಾಗಿ ಒಂದು ಅಡ್ಡಕತೆಯನ್ನು ಹೇಳುವದಕ್ಕೆ ಮೊದಲು ಮಾಡಿದನು ಕೀರ್ತನಕಾರನು. ಅದು ಏನೆಂದರೆ –

“ಒಮ್ಮೆ ತಿಪ್ಪೆಯಲ್ಲಿ ಬಿದ್ದ ಪತ್ರಾವಳಿಗೂ ಮಣ್ಣು ಹೆಂಟೆಗೂ ಮಾತುಕತೆ ನಡೆಯಿತು. ಪತ್ರಾವಳಿ ಅಂದಿತು – “ಹೆಂಟೆಣ್ಣ, ಮಳೆಗಾಲ ಆರಂಭವಾಗುವಂತೆ ತೋರುತ್ತದೆ. ಗಾಳಿ-ಮಳೆಗಳು ನಾಮುಂದೆ ನಾಮುಂದೆ ಎನ್ನುತ್ತ ಮೈ ಮೇಲೆ ದಾಳಿ ಮಾಡುವವು. ಅಂಥ ಸಂದರ್ಭದಲ್ಲಿ ನಾವು ಬದುಕುವ ಬಗೆಯೇನು? ಗಾಳಿ ಬಿರುಸಾಗಿ ಬೀಸಿದರೆ ನಾನು ಹಾರಿಹೋಗುತ್ತೇನೆ ಎಲ್ಲಿಯೋ. ಮರಮಳೆಹೊಡೆಯ ಹತ್ತಿದರೆ ನೀನು ಕರಗಿಹೋಗುತ್ತೀ. ಏನು ಉಪಾಯ ಇದಕ್ಕೆ?”

ಅಷ್ಟರಲ್ಲಿ ಶ್ರೋತೃವೃಂದದಿಂದ ಒಂದು ಮಾತು ಕೇಳಿಬಂದಿತು – ಗಾಳಿ ಮಳೆ ಎರಡೂ ಏಕಕಾಲಕ್ಕೆ ಕೂಡಿಕೊಂಡು ಬಂದರೆ ಹೇಗೆ ಮಾಡುವುದು?

ಆ ಅಡ್ಡ ಪ್ರಶ್ನೆಯನ್ನು ಕೇಳಿ ಕೀರ್ತನಕಾರನಿಗೆ ದಿಗಿಲಾಯಿತು. ಕಕ್ಕಾವಿಕ್ಕಿಯೇ ಆಗಿ ನಿಂತನು. ಊರ ಪ್ರಮುಖರನ್ನು ಹತ್ತಿರ ಕರೆದು ಕಿವಿಯಲ್ಲಿ ಹೇಳಿದನು – “ಶ್ರೋತೃವರ್ಗದಲ್ಲಿ ಇನ್ನೊಬ್ಬ ಗಿಡ್ಡನು ಉಳಿದುಕೊಂಡಿದ್ದಾನೆ. ಅವನನ್ನು ಎಬ್ಬಿಸಿ ಕಳಿಸಿರಿ. ಇಲ್ಲದಿದ್ದರೆ ಕೀರ್ತನೆ ಮುಂದೆ ಸಾಗುವದಿಲ್ಲ.”

ಜನರಲ್ಲಿ ಕಣ್ಣುತಪ್ಪಿಸಿ ಕುಳಿತ ಆ ಗಿಡ್ಡನನ್ನು ಎಬ್ಬಿಸಿ ಕಳಿಸಿದ ಬಳಿಕ, ಕೀರ್ತನವು ತಡೆಯಿಲ್ಲದೆ ಸಾಗತೊಡಗಿತು. ಉದ್ದನ್ನವರ ಮುಂದೆಯೇ ಅವನ
ಕೀರ್ತನ. ಯಾಕಂದರೆ – ಉದ್ದನ್ನವರಿಗೆ ಬುದ್ಧಿ ಕಡಿಮೆಯಂತೆ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೮೨
Next post ಕಡಲೇ ಒಮ್ಮೊಮ್ಮೆಯಾದರೂ ಬಾ

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

cheap jordans|wholesale air max|wholesale jordans|wholesale jewelry|wholesale jerseys