ಯಾರಿಗೆ ಕೊಡಬೇಕು ಕನ್ಯೆ

ಹೀಂಗ ಒಂದು ಊರಿತ್ತು. ಆ ಊರಲ್ಲಿ ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಒಬ್ಬಳೇ ಮಗಳು. ಬಹಳ ಚೆಲುವೆ; ಕಡ್ಡಿಯಿಂದ ಕೊರೆದಂತೆ ರೂಪು; ಮೈಬಣ್ಣ ಬಂಗಾರದ್ದು; ಏನು ಆ ಮೂಗು ಸಂಪಿಗೆ ತೆನೆ; ಏನು ಆ ಹಲ್ಲು ದಾಳಿಂಬರ ಬೀಜ; ಆಕೆಯನ್ನು ಯಾರು ಬೇಡವೆಂದಾರು? ಆಕೆಗಿದ್ದ ಮೂವರೂ ಸೋದರ ಮಾವಂದಿರು ಕೇಳುತ್ತಿದ್ದರು – ಆಕೆ ನನಗೆ ಬೇಕು, ನನಗೆ ಬೇಕು – ಎಂದು.

ಅಕ್ಕನಿಗೆ ಇದ್ದವಳು ಒಬ್ಬಳೇ ಮಗಳು. ಕೇಳುವವರು ಮೂವರು ತಮ್ಮಂದಿರು. ಯಾರಿಗೆ ಕೊಡಬೇಕು ?

ಎಲ್ಲರೂ ಒಳ್ಳೆಯವರೇ ಆಗಿದ್ದರು; ಚೆಲುವರೂ ಆಗಿದ್ದರು. ಒಬ್ಬನಿಗೆ ಕೊಟ್ಟರೆ ಇಬ್ಬರು ಸಿಟ್ಟಾಗುತ್ತಾರೆ. ಏನು ಮಾಡುವುದು ಯುಕ್ತಿ ?

ಮೂವರೂ ತಮ್ಮರನ್ನು ಕರೆದು ಅಕ್ಕನು, ತಲೆಗೆ ನೂರುನೂರು ರೂಪಾಯಿ ಕೊಟ್ಟಳು. “ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಿರಿ. ಯಾರು ತೀವ್ರವಾಗಿ ಹೆಚ್ಚು ಗಳಿಸಿಕೊಂಡು ಬರುವಿರೋ ಅವರಿಗೆ ನನ್ನ ಮಗಳನ್ನು ಕೊಡುವೆನು” ಎಂದು ಹೇಳಿದಳು.

ಆ ಮಾತಿಗೆ ಮೂವರೂ ಒಪ್ಪಿ ದೇಶಾಂತರಕ್ಕೆ ನಡೆದರು. ಕೆಲವು ದಿನಗಳಲ್ಲಿ ಅವರು ಮೈಸೂರಿನಂಥ ಪಟ್ಟಣಕ್ಕೆ ಹೋದರು. ಊರತುಂಬ ಅಂಗಡಿಗಳು ! ಪ್ರತಿಯೊಂದು ಅಂಗಡಿಯಲ್ಲಿ ತರತರದ ಬದುಕು ! ನೋಡುತ್ತ ನೋಡುತ್ತ ಒಂದು ಅಂಗಡಿಯನ್ನು ಪ್ರವೇಶಿಸಿದರು. ಅಲ್ಲೊಂದು ಕನ್ನಡಿಯಿತ್ತು. ಅದರಲ್ಲಿ ನೋಡಿದರೆ ಜಗತ್ತೆಲ್ಲ ಕಣ್ಣಮುಂದೆ ಬರುತ್ತಿತ್ತು. ಹಿರಿಯಣ್ಣನು ತನ್ನ ಬಳಿಯಲ್ಲಿದ್ದ ನೂರು ರೂಪಾಯಿಕೊಟ್ಟು ಅದನ್ನು ಕೊಂಡುಕೊಂಡನು.

ಇನ್ನೊಂದು ಅಂಗಡಿಯಲ್ಲಿ ವಿಚಿತ್ರವಾದ ತೊಟ್ಟಿಲು ಕಂಡರು. ಅದರಲ್ಲಿ ಕುಳಿತು ಮನಸ್ಸು ಹರಿದಲ್ಲಿ ಹೋಗಲು ಬರುವಂತಿತ್ತು. ನಡುವಿನಣ್ಣನು ಅದನ್ನು ನೂರು ರೂಪಾಯಿಗಳಿಗೆ ಖರೀದಿಮಾಡಿದನು. ಮುಂದಿನ ಪೇಟೆಯಲ್ಲಿ ಗೊಂಬೆಗಳ ಅಂಗಡಿಯಿತ್ತು. ಅಲ್ಲಿ ಸತ್ತವರನ್ನು ಬದುಕಿಸುವ ಗೊಂಬೆಗಳಿದ್ದವು. ಅವುಗಳನ್ನು ಸಣ್ಣವನು ಕೊಂಡುಕೊಂಡನು. ಅಷ್ಟಾಗುವುದಕ್ಕೆ ಊಟದ ಹೊತ್ತಾಗಿತ್ತು. ಮೂವರೂ ಹಸಿದಿದ್ದರು. ಅಕ್ಕ ಕಟ್ಟಿದ ಬುತ್ತಿಯಂತೂ ಇತ್ತು. ಅದನ್ನು ತೆಗೆದುಕೊಂಡು ಊರಹೊರಗೆ ಹಳ್ಳದ ಕಡೆಗೆ ಊಟಕ್ಕೆಂದು ನಡೆದರು. ಹಳ್ಳದಲ್ಲಿ ಕೈಕಾಲು ತೊಳೆದುಕೊಂಡು ಬಂದು ಬುತ್ತಿ ಬಿಚ್ಚಿದರು. ಇನ್ನೇನು, ಊಟಕ್ಕೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲಿ, ತಮ್ಮೂರ ಕಡೆಯ ಸಂಗತಿಯನ್ನು ತಿಳಿದುಕೊಳ್ಳಬೇಕೆಂದು ಕನ್ನಡಿಯಲ್ಲಿ ನೋಡಿದರು. ದುರ್ದೈವ ಎದುರಿಗೇ ಬಂದಂತಾಯ್ತು. ತಾವು ಮದುವೆಯಾಗಬೇಕೆಂದಿರುವ ಕನ್ಯೆ ತೀರಿಕೊಂಡಿತ್ತು. ಗೋರಿಮರಡಿಗೆ ಒಯ್ಯುವ ಸಿದ್ಧತೆ ನಡೆದಿತ್ತು. ಬಿಚ್ಚಿದ ಬುತ್ತಿ ಕಟ್ಟಿದರು. ಇನ್ನೆಲ್ಲಿಯ ಊಟವೆಂದು ಕೂಡಲೇ ತೊಟ್ಟಿಲಲ್ಲಿ ಕುಳಿತರು. ಹಾ೦ ಅನ್ನುವಷ್ಟರಲ್ಲಿ ಊರಿಗೆ ಬಂದು ತಲುಪಿದರು. ಸಣ್ಣ ತಮ್ಮನು ತನ್ನ ಬಳಿಯಲ್ಲಿರುವ ಗೊಂಬೆಯಿಂದ ಸತ್ತವಳನ್ನು ಎಬ್ಬಿಸಿದನು.

ಇನ್ನು ಹೇಳಿರಿ – ಅಕ್ಕನು ಯಾರಿಗೆ ಕೊಡಬೇಕು. ತನ್ನ ಮಗಳನ್ನು ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೧೫
Next post ವೋಟು ಬೇಟೆಯಾಟ

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

cheap jordans|wholesale air max|wholesale jordans|wholesale jewelry|wholesale jerseys