ಪಾದರಕ್ಷೆಯ ಪುಣ್ಯ

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು ನಿಶ್ಚಯಿಸಿದರು. ತಮ್ಮ ಮನೆಯೊಳಗಿನ ಒಂದು ಕೋಣೆಯಲ್ಲಿ ಗುರುಗಳು ಇಳಿದುಕೊಳ್ಳಲು ಏರ್ಪಡಿಸಿದರು. ಆದರೆ ಗುರುಗಳಿಗೆ ಬಿನ್ನಹಮಾಡಿ ದಕ್ಷಿಣೆಕೊಡಮಾಡುವುದು ಏತರಿಂದ – ಎಂದು ಆ ದಂಪತಿಗಳು ಯೋಚಿಸತೊಡಗಿದರು. ಅವರಿಗೊಂದು ಯುಕ್ತಿ ಹೊಳೆಯಿತು – “ಗುರುಗಳಿಗೆ ಪ್ರತ್ಯೇಕವಾದ ಒಂದು ಜೊತೆ ಚಮ್ಮಳಿಗೆಗಳಿವೆ. ಹೇಗಾದರೂ ಅವುಗಳನ್ನು ಅವರು ಉಪಯೋಗಿಸುವದಿಲ್ಲ. ಚೀಲದಲ್ಲಿ ಬಯತಿರಿಸಿರುತ್ತಾರೆ. ಅವುಗಳನ್ನು ಅವರಿಗೆ ಗೊತ್ತಾಗದಂತೆ ಒಯ್ದು ಮಾರಿ ಬಂದರಾಯಿತು. ತಕ್ಕಷ್ಟು ಹಣ ಬರುತ್ತದೆ. ಅದನ್ನೇ ಖರ್ಚು ಮಾಡಿ, ಗುರುಗಳಿಗೆ ಬಿನ್ನಹಮಾಡಿಸಿ ಮೇಲೆ ದಕ್ಷಿಣೆ ಕೊಡಬಹುದು.

ಗಂಟಿನಲ್ಲಿದ್ದ ಆ ಚಮ್ಮಳಿಗೆಗಳನ್ನು ಗುರುಗಳಿಗೂ ಅವರ ಸೇವಕನಿಗೂ ಗೊತ್ತಾಗದಂತೆ ಎತ್ತಿತಂದು ಕೊಟ್ಟವಳು ಹೆಂಡತಿ. ಅವುಗಳನ್ನು ಪೇಟೆಗೊಯ್ದು ಮಾರಿಕೊಂಡು ಮೂವತ್ತು ರೂಪಾಯಿ ತಂದವನು ಗಂಡ. ಆ ಬಳಿಕ ಗೋದಿ, ಅಕ್ಕಿ, ಬೇಳೆ, ಬೆಲ್ಲ, ಬೆಣ್ಣೆ, ಎಣ್ಣಿ ಮೊದಲಾದವುಗಳನ್ನು ಕೊಂಡುತಂದರು. ಗೊತ್ತು ಮಾಡಿದ ದಿವಸ ಹೂರಣಕ್ಕೆ ಹಾಕಿ ಹೋಳಿಗೆ ಮಾಡಿದರು. ತುಪ್ಪವಂತೂ ಬೆಣ್ಣೆ ಕಾಸಿದ್ದಿತ್ತು.

ಗುರುಗಳ ಸ್ನಾನ, ಪೂಜೆ ಆದ ಬಳಿಕ ಆ ದಂಪತಿಗಳು ಪಾದಪೂಜೆಗೆ ಕುಳಿತರು. ಅದು ಮುಗಿದ ಮೇಲೆ ಕರಣಪ್ರಸಾದ ತೆಗೆದುಕೊಂಡು ಗುರುಗಳಿಗೆ
ಉಣಬಡಿಸುವ ಏರ್ಪಾಡು ನಡೆಸಿದರು. ಹೋಳಿಗೆ – ತುಪ್ಪದ ಊಟದಿಂದ ಗುರುಗಳು ಸಂತೃಪ್ತರಾದರು. ಶಿಷ್ಯ ಮಕ್ಕಳು ಗುರುಗಳ ಕಾಲಿಗೆರಗಿ ಇಪ್ಪತ್ತು ರೂಪಾಯಿ ಗುರುದಕ್ಷಿಣೆಯಿಟ್ಟರು. ಗುರುಗಳಿಗೆ ಅತಿಶಯ ಆನಂದವಾಗಿ ಅವರ ಔದಾರ್ಯವನ್ನು ಹೊಗಳ ತೊಡಗಿದರು.

ಗಂಡಹೆಂಡಿರು ಕೈಮುಗಿದು – “ಅದೆಲ್ಲ ತಮ್ಮ ಪಾದರಕ್ಷೆಯ ಪುಣ್ಯ” ಎಂದು ವಿನಯಿಸಿದರು.

ಸೇವಕನನ್ನು ಕರೆದು ಗುರುಗಳು ಮುಂದಿನ ಪಯಣದ ಸಿದ್ಧತೆ ನಡೆಸಿದರು. ಗಂಡಹೆಂಡಿರನ್ನು ಕರೆದು ಅವರ ಭಕ್ತಿಯನ್ನೂ ಔದಾರ್ಯವನ್ನೂ ಕೊಂಡಾಡಿದರು. ದಂಪತಿಗಳಿಬ್ಬರೂ ಗುರುಗಳ ಕಾಲಿಗೆರಗಿ – ‘ತಮ್ಮ ಪಾದರಕ್ಷೆ ಯ ಪುಣ್ಯ’ ಎನ್ನುತ್ತ ಆಶೀರ್ವಾದ ಪಡೆದರು.

ಮುಂದಿನೂರು ತಲುಪಿ ಬೀಡು ಬಿಟ್ಟಾಗ ಗುರುಗಳು ತಮ್ಮ ಚಮ್ಮಳಿಗೆಗಳನ್ನು ಹುಡುಕಾಡಿದರೆ ಸಿಗಲೇ ಇಲ್ಲ. ಸೇವಕನನ್ನು ಕೇಳಿದರು – “ಎಲ್ಲಿ ಮಾಯವಾದವು?”

ಗುರುಗಳಿಗಂತೂ ಏನೂ ತಿಳಿಯಲಿಲ್ಲ. ಕೊನೆಗೆ ಸೇವಕನೇ ಅನುಮಾನಿಸುತ್ತ ನುಡಿದನು-

“ಹಿಂದಿನೂರಿನ  ಶಿಷ್ಯಮಕ್ಕಳು ಮಾತುಮಾತಿಗೆ ‘ತಮ್ಮ ಪಾದರಕ್ಷೆಯ ಪುಣ್ಯ’ ವೆನ್ನುತ್ತಿದ್ದರು. ಅವರೇ ಪುಣ್ಯಕಟ್ಟಿಕೊಂಡಂತೆ ಕಾಣುತ್ತದೆ.”

“ಗುರುದಕ್ಷಿಣೆ ಈ ಬಗೆಯಾಗಿ ಸಿಕ್ಕಿತೆನ್ನೋಣ – ಗುರುವಿನಿಂದ ದಕ್ಷಿಣೆ” ಎಂದರು ಗುರುಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೧೭
Next post ಪ್ರಜಾರಾಜ್ಯದ ಅಣಕಾಟ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys