ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕ್ಷಣ ಕ್ಷಣಕೂ ಏರುಬ್ಬರವಾಗಿ
ಭಗ್ನವಾಗುವ ಕನಸುಗಳ ಎಸೆಯದಿರಿ
ತುಂಬು ಕತ್ತಲೆಯ ಹೆಜ್ಜೆಗಳಿಗೆ
ಚುಕ್ಕೆಗಳ ಭರವಸೆಯ ಮಾತುಗಳು
ಗಜಿಬಿಜಿ ಹಾದಿಯಲ್ಲೂ
ಕುರುಡನಿಗೆ ಕೋಲು, ನಿರಾಳ ಉಸಿರು

ಅಂತರಂಗದ ಮಾತುಗಳು
ಮೂಕ ಕುರುಡು ಹೆಳವುಗಳೆಂದು
ನಿರಾಶರಾದರೆ ಹೇಗೆ?
ಮೌನ ಮುರಿದು ಮಾತು ಚಿಗಿತು
ಕಣ್ಣಂಚಿನ ಹನಿಗಳು
ಗಲ್ಲ ಸ್ಪರ್ಶಿಸಿ ಮುಂಗೈಗೆ ಬಿದ್ದದ್ದೇ
ಹೃದಯ ಹಗುರು ಸಂತೃಪ್ತ ಉಸಿರು

ವರ್ತಮಾನ ಭವಿಷ್ಯವೆಲ್ಲಾ
ಅರ್ಥವಿಲ್ಲದ್ದು ಎಂದಿರಾ !
ಹುಷಾರು, ಕಸಕಡ್ಡಿ ಬೆಳೆದು
ಬರಡಾದೀತು ಮನಸು
ಸುಟ್ಟು ಸುಣ್ಣವಾದಾವು ಕನಸುಗಳು,
ಮೇಲೆ ಕಟ್ಟಿಬಿಟ್ಟಾರು ಸಮಾಧಿ-
ನೋಡಿ ಆಕಾಶದಂಗಳ
ತೆರ ತೆರನಾದ ಬೆಳ್ಳಿಮೋಡಗಳ
ಕ್ಷಣ ಕ್ಷಣದ ಸಂತಸ
ಇದ್ದರೆ ಇರಲಿ ಏನಂತೆ ನಡುವೆ
ಕಪ್ಪು ಹಳದಿ ಮೋಡಗಳೂ-
ಕೆನ್ನೆ ಮೇಲಿನ ಗುಳಿಯಂತೆ.

ಬಿಸಿಲು ಬೇಗೆ
ಎಲ್ಲೆಲ್ಲೂ ದಾವಾನಲ, ನೀರಡಿಕೆ
ಎದುರಿಗೆ ಸಮುದ್ರದ ಭೋರ್ಗರೆತ
ಸಮುದ್ರಕ್ಕೆ ಬಾಯಿಹಚ್ಚಿ
ತಣಿಯುವ ತವಕ
ಆದರೆ, ಉಪ್ಪುಪ್ಪು ಜಿಗುಟು ಎಂದರೆ ಹೇಗೆ?
ಇರಲಿ, ಮುಖದ ಮೇಲಾದರೂ
ನೀರು ಚಿಮುಕಿಸಿಕೊಳ್ಳಿ
ಕಡಲಿನಲಿ ಕಾಲಾದರೂ ಎದ್ದಿ
ತಂಪಡರೀತು ಮೈಮನ.

ಬಿಡಿ ಆತ್ಮ ನಿಂದನೆ
ಮನದಾಳದ ಮೌನ, ನಿರಾಶೆ
ಒಂದೊಂದೆ ಒಡಲಾಳಕ್ಕೆ (ಕಲೀಡೋಸ್ಕೋಪ್) ಇಳಿಸಿ.

ಆಹಾ !!
ಎಷ್ಟೊಂದು ಮಾತುಗಳು
ಎಷ್ಟೊಂದು ಚಿತ್ರಗಳು
ಎಷ್ಟೊಂದು ಅರ್ಥಗಳು
ಈ ಮಗ್ಗಲು ಆ ಮಗ್ಗಲು
ಮತ್ತೊಂದು ಮಗ್ಗಲು ಇನ್ನೊಂದು ಮಗ್ಗಲು
ಹಾಗೇ ಮತ್ತೆ ಮತ್ತೆ
ತಡಕಾಟ ಹುಡುಕಾಟ

ಏನಿದು ಸಂಭ್ರಮ
ಬಿರಿದ ನೆಲಕೆ ಮಳೆ ಹನಿಯ ಸ್ಪರ್ಶ
ಮೊಗ್ಗೊಡೆದು ಘಮ್ಮೆನ್ನುವ ಸಮಯ.
*****
ಪುಸ್ತಕ: ಇರುವಿಕೆ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೆಡ್ಡಿ ಸೋಲಿಲ್ಲ, ಸುಸ್ಮಕ್ಕ ಗೆಲ್ಲಿಲ್ಲ, ವರಮಹಾಲಕ್ಷ್ಮಿ ವರ ನೀಡ್ಲಿಲ್ಲ.
Next post ಎಲ್ಲೆ ಇರು ನಾ ನಿನ್ನ ನೆನೆಯುವೆನು

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys