ಚೈತ್ರ

ಯಾವ ಋತು, ಮಾಸ ಪಕ್ಷಗಳಿಲ್ಲ ಇಲ್ಲಿ
ಆಷಾಡದ ಮಳೆ ನೋಡುವ
ಶ್ರಾವಣ ಭಕ್ತರೊಳಗೊಂದಾಗುವ
ಚೈತ್ರ ವಸಂತದೊಳಗೆ ಚಿಗುರುವಾಸೆ.
ಶ್ರಾವಣದ ಜೋಕಾಲಿಗೆ ನಿಟ್ಟುಸಿರಿಡುತ್ತೇನೆ…..
ಹಳ್ಳ ಹೊಳೆ ಕೊಳ್ಳ ನೆನಪಾದಾಗೆಲ್ಲ
ನಾನೇ ತೇಲಿಬಿಡಲೇನೋ ಎಂದು
ಚಡಪಡಿಸುತ್ತೇನೆ.
ಈ ಉರಿಬಸಿಲಿನ ಮರುಭೂಮಿಯಲ್ಲೂ
ನನ್ನ ನಾಡು ಹಸಿರು ಹೊಲಗದ್ದೆ,
ಹೂವುಗಳ ಮಂದಾರ ನೆನಪಿಸಿಕೊಂಡಾಗೆಲ್ಲ
ಚೈತನ್ಯ ಮೂಡಿ ಚೈತ್ರವಾಗುತ್ತೇನೆ
ನೆನಪುಗಳು ಬಸಿರಾಗುತ್ತವೆ
ವೇದನೆಗೆ ಸಿಕ್ಕು ಕವನಗಳು ಕುದಿಯುತ್ತವೆ.
ಆಷಾಢದ ಮುಸಲಧಾರೆಯಂತೆ
ಕವನಗಳು ಪ್ರಸವಿಸುವಾಗ
ನಾನು ವಸಂತಿಸುತ್ತೇನೆ
*****

ಪುಸ್ತಕ: ಗಾಂಜಾ ಡಾಲಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಣ್ಣ ಸಂಗತಿ
Next post ಲಿಂಗಮ್ಮನ ವಚನಗಳು – ೩

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

cheap jordans|wholesale air max|wholesale jordans|wholesale jewelry|wholesale jerseys