ಸಂಲಗ್ನ

ಸಮುದ್ರದಾಳಕ್ಕೆ ಇಳಿಯುತ್ತಿದ್ದಾಗಲೆಲ್ಲ
ನನ್ನ ಆದರ್ಶದ ಮೌಲ್ಯಗಳು
ಗಹಗಹಿಸಿ ನಕ್ಕು
ತರಗೆಲೆಗಳಂತೆ ಮೇಲೆಯೇ
ತೇಲುತ್ತವೆ.
ಕೋರಲ್‌ಗಳಿಂದ ತರಚಿದ ಕಾಲು
ಮಾಂಸ ರಕ್ತದ ಹನಿಗಳ ಸುತ್ತ
ಸುತ್ತುತಲಿರುವ ಭಾವನೆಗಳ
ಸೌಧದೊಳಗೆ ಕುಸಿದು
ತಿರುಗಣಿಯ ಗುಂಡಿಯ
ಸೆಳೆತಕ್ಕೆ ಸಿಗುವಾಗ
ನನ್ನ ನಾ ವಿಮರ್ಶಿಸಿಕೊಳ್ಳುತ್ತೇನೆ
ಬದುಕಿನನ್ವೇಷಣೆಯಲ್ಲಿ
ಏನಾದರೂ ಒಂದಿಷ್ಟು ಕಂಡುಕೊಂಡಿದ್ದೇನೆಂದಾದರೆ
ಸೂರ್ಯನಾಚೆಯ
ಭ್ರಮೆಯ ಆಕಾಶ
ನೆಲದಾಳದೊಳಗಿನ
ಉಪ್ಪು ನೀರಿನ ಏರಿಳಿತಗಳ
ಸಂಲಗ್ನ
*****

ಪುಸ್ತಕ: ಗಾಂಜಾ ಡಾಲಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಾರಿ ಬಿಡಿ
Next post ಲಿಂಗಮ್ಮನ ವಚನಗಳು – ೫

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys