ಅಂತರಂಗದ ಅಕ್ಷರಮಾಲೆ

ಅಲ್ಲಲ್ಲಿ ಓಡುವ ನನ್ನ ಮನವೆ
ಆನಂದದ ನೆಲೆಯಲ್ಲಿ ನಿಲ್ಲು ಮನವೆ
ಇಲ್ಲಿ ಧ್ಯಾನ, ಸಾಧನೆ ತಪವು ಎಲ್ಲ.
ಈರ್ಷೆ, ಅಸೂಯೆ, ಆತಂಕವಿಲ್ಲ
ಉದಯ ರವಿಯ ಕಿರಣ ಸೊಬಗೆಲ್ಲ
ಊರ್ಧ್ವಗಾಮಿಯಾಗಿ ನುಡಿ ಸೊಲ್ಲ.
ಋಷಿ ಮುನಿಯ ಮನದ ಸತ್ಯವೇ ಬೆಲ್ಲ
ಎಲ್ಲಿದ್ದರೂ ತಿಳಿ, ತಿಳಿವನ್ನು ತಿಳಿಗೊಳದಿನಿಂದು
ಏನು ಮಾಡಿದರೇನು `ನಾನು ಎಂಬುದ ತಿಳಿ ಇಂದು.
ಐರಾವತವನ ನೇರು, ಐದು ವೇದದ ಸಾರ ತಿಳಿದು
ಒಂದೇ ಒಂದು ಸತ್ಯವೆಂದು ತಿಳಿ
ಓ ಜಸ್ಸು ತುಂಬಲಿ, ಬಾಳ ಮುನ್ನಡೆಯಲಿ.
ಔತಣವಿದು ಓಂಕಾರ ಸವಿಯಲು
ಅಂತವಿಲ್ಲದ ಪಾರದಲಿ ಅನಂತವಾಗಿ ಬೆಳೆದು
ಆಃಹಾ ಎಂದು ಸವಿ ಅಮೃತವ ಜಿಹ್ವೆಗೆ ಸುರಿದು.

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೋಳ ಕಡಿತು ನನಗೊಂದು
Next post ಟೋಪಿವಾಲ ಮತ್ತು ಇಲಿಗಳು

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

cheap jordans|wholesale air max|wholesale jordans|wholesale jewelry|wholesale jerseys