ಬುದ್ಧನ ಹಯವೇ! ನಿನಗೆ ವಂದನೆ!

ಬುದ್ಧನ ಕಾಡಿನಲ್ಲಿ ಬಿಟ್ಟುಬಂದ ಹಯವೇ
ನೀ ಅರಮನೆಯ ಲಾಯದಲಿ ಏಕೆ ಆದೆ ಲಯವು?
ಹದವರಿಯಲು ಹುಡುಕುತಲಿರುವೆ
ಎಲ್ಲಿಯೂ ನೀ ಕಾಣದೆ ಇರುವೆ.

ಮನ ಲಾಯಕೆ ಬಾ ಹಯವೆ
ಹೃದಯ ಹುಲ್ಲುಗಾವಲ ಮೇಯಲು,
ಕಾಡುತಿದೆ ಭವದ ಭಯವು
ಭವ ಸಾಗರದಲಿ ಹೃದಯ ಲಹರಿ
ಹುಡುಕುತಿದೆ ಬುದ್ಧನ ಬೆಳಕಿನ ಕಣ್ಣು
ಭವಕ್ಕೆ ಬೇಕು ಬುದ್ಧತ್ವದ ಹಣ್ಣು.

ಭೋಧಿ ವೃಕ್ಷದ ಎಲೆ ಎಲೆಯಲ್ಲಿ
ಬುದ್ಧನ ಅಭಯಹಸ್ತ ಸೆಲೆ ಸೆಲೆಯಲ್ಲಿ
ಶಾಖೆ ಶಾಖೆಯಲಿ ಬುದ್ಧನ ತೋಳತೆಕ್ಕೆ
ನೆರಳಲ್ಲಿ ನೆಲೆನಿಂತು ಕರೆಯುತ್ತಿದೆ
ಬುದ್ಧನೆದೆಯ ಪರಮಶಾಂತಿ ಮೆರೆಯುತಿದೆ.

ತೆರದ ಹೆಬ್ಬಾಗಿಲಲಿ ಉರಿಯುತಿದೆ
ಜಗವೆಲ್ಲ ಬೆಳಗುವ ದೀಪ
ಹಯವೆ ಛಂಗನೆ ಹಾರು ಭವದ ಕೂಪ
ಹಚ್ಚಬೇಕು ಜನ್ಮ ಮುಕ್ತಿಗೆ ಧೂಪ
ಎದೆಯಲಿ ಮೊಳಗುತ್ತಿದೆ ಬೌದ್ಧ ಆಲಾಪ.

ನಿಬಿಡವನ ಕಾಡುಗಳಲಿ
ವಕ್ರ ದಾರಿಗಳ ಚಕ್ರ ತಿರುವಿನಲಿ
ನಿಲ್ಲದ ನದಿಯ ಸಾಗರ ಮಿಲನದಲಿ
ತಲ್ಲಣಿಸುತಿದೆ ಎದೆ ಬುದ್ಧತ್ವದ
ಚರಮ ಸೀಮೆಗೆ, ಹಯವೆ! ನಡೆ ಮುಂದೆ.

ಹಯವೆ! ನೀ ಕಂಡಿರುವೆ
ಬುದ್ಧನ ಯಾನ ತಾಣ
ಬುದ್ಧನ ತ್ರಾಣ ಪ್ರಾಣ
ಪಂಚಪ್ರಾಣ ಹೊತ್ತ ನೀ
ಬುದ್ಧನೆದೆಯ ಭ್ರೂಣ.

ಸಿದ್ಧ ಬುದ್ಧನಾಗೆ ಆಗಸದ ರವಿಯಾದ
ಗೆದ್ದಮನದಲಿ ಕಾವ್ಯತುಂಬಿ ಕವಿಯಾದ
ಸರಹದ್ದಿಲ್ಲದೆ ಹಯವೆ ನೀ ಸಾಗೆ
ಬುದ್ಧ, ಜಗಕೆ ತಮವ ಕಳೆದು ಬೆಳಕಾದ.

ಹಯವದನ! ತೋರು ಬುದ್ಧನ ಸದನ
ಬಾಳ ಕದನದಲಿ ಶೋಧನ, ವೇದನ
ತಾಳ್ಮೆಯಲಿ ಮಾಡಿಸು ಬುದ್ಧನ ಸಾಧನ
ಇದು ಆಂತರ್ಯದ ಅನಂತ ನಿವೇದನ.

ಬುದ್ಧನ ವಸಂತ ತಾಣವ ನೀ ಕಂಡಿರುವೆ
ಸಿದ್ಧನ ಬೆಳದಿಂಗಳ ಚೇತನವ ನೀ ಉಂಡಿರುವೆ
ಬುದ್ಧನ ಜೊತೆಯಲ್ಲಿ ಎದ್ದು ಓಡಿದವ ನೀನು
ಸದ್ದು ಗದ್ದಲವಿಲ್ಲದೆ ಅನಂತಕ್ಕೆ ದಾರಿ ತೋರಿರುವೆ
ಬುದ್ಧನ ರಥದ ಮನೋರಥವು ನೀನಾಗಿರುವೆ.
ಹೆಜ್ಞೆ ಹೆಜ್ಞೆಗೆ ಮಂತ್ರ, ಹೆಜ್ಞೆ ಹೆಜ್ಞೆಗೆ
ಬುದ್ಧನ ನಲ್ಮೆ ನುಡಿ, ನಿನ್ನ ಕಿವಿ ತುಂಬಿರಬೇಕು.
ಬುದ್ಧನ ಮಂದಸ್ಮಿತದ ಸರಕು ತುಂಬಿ ಬಾ
ಜಗದ ಖಾಲಿ ಹೃದಯಗಳ ತುಂಬ ಬಾ.

ಸಿದ್ಧರ್ಥ ನಿನ್ನ ಬೆನ್ನೇರಿದಾಗ
ಬಾನೆಲ್ಲಾ ಕಾಂತಿ ಪಥವಾಗಿತ್ತು
ಭೂಮಿ ಕ್ರಾಂತಿ ಪಥದಲ್ಲಿತ್ತು
ಶಾಂತಿ ನಾಂದಿಯಾಗಿತ್ತು
ಭ್ರಾಂತಿ ತುಂಬಿದ ಹೃದಯಕ್ಕೆ
ಹಯದ ಬೆನ್ನೇರಿ ಬಂದಿತ್ತು ಉದಯ.

ಬುವಿ ನಡೆದಿತ್ತು ನಿನ್ನ ಕಾಲೊರಸ ಸದ್ದಿನಲಿ
ಬಾನ ಬೆಳದಿತ್ತು ನಿನ್ನ ತಾಳ ವೇಗಕ್ಕೆ
ಬೆಟ್ಟ ಅದರಿತ್ತು, ’ವೃಕ್ಷ ಕಂಪಿಸಿತ್ತು’
ನದಿ ತುಂಬಿ ಹರಿದಿತ್ತು ಬುದ್ಧತ್ವದಿಂದ.

ಜಗದಲ್ಲಿ ಬಿತ್ತಿದ ನಿನ್ನ ಹೆಜ್ಞೆಯಲಿ
ಬೌದ್ಧಬೀಜವ ಬಿತ್ತಿದೆ, ಮಾನವರ ಎತ್ತಿದೆ
ಅತ್ತು ಸೋಲುವ ಹೃದಯದ ಎತ್ತರಕೆ ಒಯ್ದೆ.

ಬುದ್ಧಂ ಶರಣಂ ಗಚ್ಛಾಮಿ, ಧರ್ಮಂ ಶರಣಂ ಗಚ್ಛಾಮಿ
ಸಂಘಂ ಶರಣಂ ಗಚ್ಛಾಮಿ ಎಂಬ ತ್ರಿಗುಳ ಬಂಧಿಯಲಿ
ನಡೆ ಮುಂದೆ ನಡೆ ಮುಂದೆ ವಿಶ್ವ ಕಲ್ಯಾಣಕ್ಕೆ.

******

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀಕೃಷ್ಣ ದಂಡಕ
Next post ಶ್ರೀ ಶಿವಾಪರಾಧ ಸ್ತೋತ್ರ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

cheap jordans|wholesale air max|wholesale jordans|wholesale jewelry|wholesale jerseys