ಶ್ರೀ ಕೃಷ್ಣನಂತೊಂದು ಮುಗಿಲು

ಶ್ರೀ ಕೃಷ್ಣನಂತೊಂದು ಮುಗಿಲು
ರಾಧೆಯಂತಿನ್ನೊಂದು ಮುಗಿಲು
ಹೊಳೆದಾರಿ ಕಾಯುವ ಮುಗಿಲು
ಜರತಾರಿ ಸೆರಗಿನ ಮುಗಿಲು

ಬೆಣ್ಣೆಯ ಗಿರಿಯಂತೆ ಮುಗಿಲು ಅಲ್ಲೆ
ಬಳಸುವ ಯಮುನೆಯ ಮುಗಿಲು
ಗೋಪಿಯರ ತಂಡದ ಮುಗಿಲು ಬಲ್ಲೆ
ಹರಿಗೋಲು ಹುಣ್ಣಿಮೆ ಹೊನಲು

ಬಳ್ಳಿಯ ಮನೆಯಂತೆ ಮುಗಿಲು ಅಲ್ಲಿ
ಹಳ್ಳಿಯ ಹಾಡಿನ ಹುಯಿಲು
ಹೆಣ್ಣಿಗೆ ಎಷ್ಟೊಂದು ದಿಗಿಲು ನಿಲ್ಲಿ
ಕೆನ್ನೆಗೆ ಹೂವಿನ ನೆಳಲು

ಕಿರುತಾರೆ ಮುಡಿದೊಂದು ಮುಗಿಲು ತನ್ನ
ಚೆಲುವಿಗೆ ಬೆರಗಾದ ಮುಗಿಲು
ಕೊಳಲನು ತುಟಿಗಿಟ್ಟ ಮುಗಿಲು ನಿನ್ನ
ತುಟಿ ನನ್ನ ಕೊಳಲೆನುವ ಮುಗಿಲು

ಬಾ ಬಾರೆ ಎನ್ನುವ ಮುಗಿಲು ಅಲ್ಲಿ
ಬರಲಾರೆನೆನ್ನುವ ಮುಗಿಲು
ಕೆನ್ನೆ ಕೆಂಪಾದೊಂದು ಮುಗಿಲು ಎಲ್ಲಿ
ಇನ್ನೊಂದು ಮುತ್ತೆನುವ ಮುಗಿಲು

ಶ್ರೀ ಕೃಷ್ಣನಂತೊಂದು ಮುಗಿಲು
ರಾಧೆಯಂತಿನ್ನೊಂದು ಮುಗಿಲು
ಅಲ್ಲೊಂದು ಇಲ್ಲೊಂದು ಮುಗಿಲು
ಮುಗಿಲೆಲ್ಲ ಕೃಷ್ಣನ ಕೊಳಲು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಬ್ಬಾ! ಯೀ ಯೆಂಗ್ಸ್ರೇ ಯೀಗೇ…
Next post ಚಂದಿರ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys