ಝೆನ್ ಹಾಯಿಕುಗಳು

ಬುದ್ಧ
ಬೇರಾಗು
ನನ್ನಲ್ಲಿ
ಸಿದ್ಧಿ
ತೇರಾಗು.

ಝೆನ್‌ಗೆ ಬೇಕೆ?
ತುತ್ತೂರಿ ಪೀಪಿ
ಶಂಖನಾದ, ಖಡ್ಗ?
ನಿಂತಿರುವ ನೋಡಿ
ಮುಗ್ಧ ಹುಡುಗ
ಓದಿ ಝೆನ್ ಅವನ
ಮೊಗದ ತುಂಬಾ!

ನನ್ನ ಹೃದಯ
ವೀಣೆಯ
ಝೆನ್ ತಂತಿಯ
ಝೆನ್ ಝೇಂಕಾರ
ಅದು ನನ್ನ ಸಾಕಾರ.

ಕವಿತೆ ಬರೆದರೆ
ಕವಿತೆ ಚಿಟ್ಟೆ
ಗೂಡ ಬಿಟ್ಟು ಹಾರೀತು
ಪ್ರೀತಿ ತೋರಿದರೆ
ಗೂಡ ಕಟ್ಟೀತು
ಎದೆ ಆಳದಲ್ಲಿ.

ಹಸುರೆಲೆಯ
ಹಸಿರು ವಾಗ್ದಾನದಲಿ
ಉನ್ಮತ್ತ ಇಬ್ಬನಿ
ಬಿಸಿಲು ಮಂಚದಲಿ
ಉಸಿರಾಡುತ್ತಿದೆ
ಅದೆಷ್ಟು ಕ್ಷಣ?

ಎರಡು ಇಬ್ಬನಿ
ಅಳುತ್ತಿವೆ, ಸತ್ತ
ಮೂರನೇಯ ಹನಿಗಾಗಿ,

ನನ್ನೊಳಗೆ
ನಾಧುಮುಕಿ
ನೆಲೆ ಹುಡುಕಿನಿಂತೆ.
ನನ್ನೊಳಗೆ
ನಾ ತೇಲಿ
ದಡ ಸೇರಿ ನಿಂತೆ.

ಇಬ್ಬನಿ ವಿರಮಿಸುತ್ತಿದೆ
ಕಿರಣದ ತೋಳಲ್ಲಿ
ತೋಟದ ಎಲೆಯ
ತುಟ್ಟ ತುದಿಯಲ್ಲಿ,
ಮನೆಗೆ ಸುಣ್ಣ ಬಣ್ಣ
ಮನಕೆ ಹಚ್ಚುವುದೇನು?
ಯಾವ ಬಣ್ಣ, ಯಾವ ಕಣ್ಣ?
ಕೊನೆಗೆ ಸೇರುವುದು
ಯಾವ ಊರು ಅಣ್ಣಾ!

ಉದಯ ವಿಹಾರದಲಿ
ಎರೆಹುಳು ಹುಡುಕುತಿದೆ
ಬಾನ ನಕ್ಷತ್ರ, ದಡದ ಶಂಖ ಚಕ್ರ
ಹಿಂದೆ ಹೆಜ್ಞೆ ಗುರುತನು ಬಿಟ್ಟು
ಮುಟ್ಟುತಿದೆ ಗುರಿಯ ಘಟ್ಟ.

ಹಸಿರು ಗದ್ದೆಗಳು
ಬಸಿರ ಮಾತಿಗೆ
ನಕ್ಷತ್ರದ ಮಿಣುಕು ಮಾತು.
ತೆನೆಯ ಸೊಗದ ನರ್ತನಕ್ಕೆ
ಗೀತ ಹಾಡುತಿದೆ
ಹಕ್ಕಿ ಬಾನಿಗಾತು.

ತೃಪ್ತಿ ಹಿಡಿಯಲ್ಲಿ
ಹೂವು ಮುಡಿಯಲ್ಲಿ
ದೀಪ್ತಿ, ಎಲ್ಲೆಡೆಯಲ್ಲಿ
ಹೃದಯ ಗುಡಿಯಲ್ಲಿ

ಜಗವೊಂದು
ಬರೆಯುವ ಹಲಗೆ
ಬರೆದಿಡು ಪ್ರೇಮ ಪತ್ರ.

ಬೋಳು ರೆಂಬೆಯ ಮೇಲೆ
ನಡುಗುವ ಹಕ್ಕಿ ಜೋಡಿಗೆ
ರೆಕ್ಕೆ ಕಂಬಳಿಯ ಮೋಡಿ
ಹಿಮವು ಬೀಳುತಿದೆ
ಹೃದಯ ಮುದುಡುತಿದೆ
ಶೋಕ ಗೀತೆ ಹಾಡಿ.

ಪೀಚ್, ಪ್ಲಮ್
ಮರಗಳೂ ನಿಂತಿವೆ
ಬೆಟ್ಟದ ತುದಿಯಲ್ಲಿ
ಬಿದ್ದು ಉರುಳುತಿವೆ
ಹಣ್ಣುಗಳು, ಮಣ್ಣಿನಲ್ಲಿ
ಬೆಟ್ಟ ಕೊಚ್ಚುತ್ತಿದೆ
ನನ್ನದೆಂಬ ಜಂಭ! ಅದೆಷ್ಟಡಂಭ!

ಧೈರ್ಯ ಸ್ಥೈರ್ಯದಿ
ಒಣಗಿದ ಮರನಿಂತಿದೆ
ಚಳಿಯ ಒಪ್ಪಿಕೊಂಡು
ಮತ್ತೆ ಚೈತ್ರ ಚಿಗುರು
ಹೂಗಳ, ಅಪ್ಪಿಕೊಂಡು
ಬಂದೇ ಬಂದಾನು ವಸಂತನೆಂದು.

ಅನುಭವದಲ್ಲಿ
ಭಾವ ಒಂದೇ ಏಕೆ?
ಪ್ರಭಾವ, ವಿಭಾವಗಳ ಸಾಲು
ಹುಡುಕಿದರೆ ಸಿಗದಿರುವುದೇ
ಝೆನ್ ಮಾಲು?

ಶೂನ್ಯಗಳ ಸನ್ನೆಯಲಿ
ಕಂಡುಕೋ
ನನ್ನಿಯ ಅರಿವು
ನಡೆಸುವುದು ಮುನ್ನ
ತಿಳಿಸುವುದು ವಿಶ್ವ ಅವಿಚ್ಛಿನ್ನ

ರೆಂಬೆಗಳು ತೂಗುತಿವೆ
ಎಲೆಗಳು, ಮರ್ಮರ ಹಾಡುತಿವೆ
ವೃಕ್ಷನಿಂತು ನಿದ್ರಿಸುತ್ತಿದೆ
ತೋಟದ ಕಟ್ಟೆಯಲ್ಲಿ
ಕುಳಿತು ನಾ ದೃಷ್ಟಿಸಿರುವೆ.

ಮೊಗ್ಗು ಹೂ ಕಾಯಿ
ಹಣ್ಣುಗಳಿರಲು
ಗಿಡವೆಂದು, ಒಂಟಿಯಿಲ್ಲ
ನಾ ನಿಂತಿರುವೆ ಒಂಟಿ
ಬೀದಿ ಕಂಭದಂತೆ.

ಎಲೆಗಳೂ ಪಟಪಟ
ಮಾತನಾಡುತಿವೆ
ನಿಂತು ವೃಕ್ಷ
ಕೇಳಿ ಕೇಳಿ
ತಲೆ ತೂಗುತಿದೆ.

ಕ್ಷಣ ಕ್ಷಣದ ಬಾಳಲ್ಲಿ
ಕಣ ಕಣದ ದೈವ
ಬೇಕೇ? ಒಣ ಒಣದ ತತ್ವ
ಝೆನ್‌ಲಿ ಒಂದಾಗೆ
ಹೊರ ಬಾರದೆ ಸತ್ವ?

ನನಗೆ ಇದೆ ಹೆಸರು
ನನ್ನೊಡನೆ ಹುಟ್ಟಿದ
ಮನಕೆ ಇದೆ ಯಾವ ಹೆಸರು?
ನನಗೆ ಇದೆ ಉಸಿರು
ಮನಕೆ ಇದೆ ಯಾವ ಬಸಿರು?

ಅನಂತದಿಂದ
ಸಿಡಿದಿರುವ, ನಾನೊಂದು
ಜೀವರಕ್ತ ಬಿಂದು
ಬಾಳು ಬೆಳೆಯೆ ಎತ್ತರಕ್ಕೆ
ಬದುಕೊಂದು ಸಿಂಧು.

ಆಗಸ ಭೂಮಿಯ ಒಂದಾಗಿಸಿ
ಝೆನ್ ನೂಲಿನಲಿ ಜಗವ ಹೆಣೆದೆ
ನಾನು, ನನ್ನ ಮನ
ಬಲುದೂರ ಸರಿದು
ಬೇರೆಯಾಗಿಯೆ ನಿಂತೆ.

ಉದುರಿದ ಎಲೆಯೊಂದ
ಎತ್ತಿ, ತುಟಿಗೊತ್ತಿಕೊಂಡೆ
ಗಿಡ ಕಣ್ಣಿಟ್ಟು ನೋಡಿ
ತಲೆ ತೂಗಿ ಹೂವರಿಳಿಸಿತು
ಗಿಡ ತುಂಬ.

ತತ್ತರಿಸುವ ಮನ
ತಥಾಗತನ ಎದುರಲ್ಲಿ
ಕರಗಿ ನೀರಾಗುತ್ತಿರುವ
ಹಿಮಗಡ್ಡೆಯ ಗುಡ್ಡೆ.

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಯಿಕು-ಹಂದರ
Next post ಕೋಶಗ್ರಂಥ ವ್ಯಾಕರಣ ಪ್ರಸಂಗದಿ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys