ಹೊಸ ವರ್ಷ ಬಂದಂತೆ ಯಾರು ಬಂದಾರು

ಹೊಸ ವರ್ಷ ಬಂದಂತೆ ಯಾರು ಬಂದಾರು
ಗಿಡಮರಕೆ ಹೊಸವಸ್ತ್ರ ಯಾರು ತಂದಾರು
ಹಾಡೆಂದು ಕೋಗಿಲೆಯ ಕೂಗಿ ಕರೆದಾರು
ಮಾವಿನಾ ಚಿಗುರನ್ನು ತಿನಲು ಕೊಟ್ಟಾರು.

ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ
ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ
ಬಂದನೊ ವಸಂತ ಬಂದಿಗಳೆ ಎಲ್ಲ
ಹೊಸ ಬಯಕೆ, ಹೊಸ ಆಲೆ ರುಚಿರುಚಿಯ ಬೆಲ್ಲ.

ಏನಿದೆಯೊ ಇಲ್ಲವೋ ಆಸೆಯೊಂದುಂಟು
ಬಾನಿನಲಿ ಹೊಸ ಸೂರ್ಯ ಬರುವ ಮಾತುಂಟು
ಸಂಜೆಯಲಿ ಮಿಂಚಿದರೆ ಅಂಚುಗಳ ಬಣ್ಣ
ಕಪ್ಪಾದರೂ ಮುಗಿಲು ಜರಿಸೀರೆಯಣ್ಣ.

ನೆನಪುಗಳ ಜೋಲಿಯಲಿ ತೂಗುವುದು ಮನಸು
ಕಟ್ಟುವುದು ಮಾಲೆಯಲಿ ಹೊಸ ಹೊಸಾ ಕನಸು
ನನಸಾಗದಿದ್ದರೂ ಕನಸಿಗಿದೆ ಘನತೆ
ತೈಲ ಯಾವುದೆ ಇರಲಿ ಉರಿಯುವುದು ಹಣತೆ.
*****

 

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹನಮಂತ ಹಾರಿದಾ ಲಂಕಾ
Next post ನಗೆ ಡಂಗುರ – ೫೫

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys