ಯಾಕೆ ಹೀಗೆ ಬೀಸುತ್ತಿರಬೇಕು ಗಾಳಿ….

ಯಾಕೆ ಹೀಗೆ ಬೀಸುತ್ತಿರಬೇಕು ಗಾಳಿ
ಯಾಕೆ ಕಡಲು ದಡ ಮೀರದೆ ನಿಂತಿದೆ ತಾಳಿ;
ನೆಲಕೆ ಯಾಕೆ ಮಳೆ ಹೂಡಲೆ ಬೇಕು ದಾಳಿ
ನಗುವ ಯಾಕೆ ಯಮ ಜೀವಗಳೆಲ್ಲವ ಹೂಳಿ?

ಹೇಗೆ ಚಿಗುರುವುದು ಬೋಳು ಗಿಡದಿಂದ ಹಸಿರು
ಹೇಗೆ ಸೇರುವುದು ದೇಹ ದೇಹದಲಿ ಉಸಿರು;
ಯಾವುದು ಈ ವಿಶ್ವವನೆ ಪೊರೆಯುವ ಬಸಿರು
ಚುಕ್ಕಿ ಸಾಲಿನಲಿ ಹೊಳೆಯುವುದದಾರ ಹೆಸರು?

ಯಾರು ಕರೆಸುವರು ತಪ್ಪದೆ ಪ್ರತಿದಿನ ಸೂರ್ಯನ
ಯಾರು ಕಳಿಸುವರು ಬಾನಿಗೆ ಹುಣ್ಣಿಮೆ ಚಂದ್ರನ;
ಫಳ ಫಳ ಹೊಳೆಯುವ ತಾರೆಗೆ ಯಾರೋ ಕಾರಣ
ಬುಗುರಿ ಆಡಿಸುವರಾರೋ ಭೂಮಿಯ ದಿನ ದಿನ?

ಅದನು ಕಾಣುವ ಆಸೆಯು ಕಾಡಲಿ ಕಣ್ಣನು
ಅದನೆ ಕೇಳುವ ಆಸೆಯು ಕವಿಯಲಿ ಕಿವಿಯನು
ಅದನು ಅರಿಯುವ ಬಯಕೆಯು ಬರೆಸಲಿ ಹಾಡನು
ಅದರೊಳು ಬೆರೆಯುವ ಹುಚ್ಚಿಗೆ ತಿನಿಸುವೆ ಬಾಳನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಸರಿಸಿದ ಗಂಧ
Next post ಆಶಮಾಡಿ ಪಾಶಕ ಬಿದ್ದಿತೋ ಚಿಗರಿ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys