ಧೋ ಎಂದು ಸುರಿಯುತಿದೆ

ವರ್ಗ: ಕವನ
ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್

ವ್ಯಾಕರಣ ದೋಷ ತಿದ್ದುಪಡಿ: ಕಿಶೋ ಚಂದ್ರ

೨೩

ಧೋ ಎ೦ದು ಸುರಿಯುತಿದೆ ಭಾರಿ ಮಳೆ ಇಲ್ಲಿ,
ಗಾಳಿ ಚೀರುತ್ತಲಿದೆ ಎಲ್ಲ ದಿಕ್ಕಲ್ಲಿ,
ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ,
ಹೇಗೆ ಬರಲಿ ನಿನ್ನ ಬಳಿಗೆ ಇನಿಯ?
ಕೇಳಬೇಕಿದೆ ನಿನ್ನ ಜೇನುದನಿಯ,

ಇಂಗಿಹೋಯಿತು ಸಂಜೆ ಇರುಳ ಸೆರಗಲ್ಲಿ,
ಭಂಗಪಡುತಿವೆ ತಾರೆ ಮುಗಿಲ ಮರೆಯಲ್ಲಿ,
ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ,
ಹೇಗೆ ತಲುಪಲಿ ಹೇಳು ನಿನ್ನ ಮನೆಯ?
ಹೇಗೆ ಸೇರಲಿ ಪ್ರೀತಿಪಥದ ಕೊನೆಯ?

ಹಳ್ಳ ಕೂಗುತ್ತಲಿದೆ ತುಂಬಿ ಮಳೆಯಲ್ಲಿ,
ಮನವೊ ಕುದಿಯುತ್ತಲಿದೆ ನಿನ್ನ ನೆನಪಲ್ಲಿ,
ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ,
ಹೇಗೆ ಬರಲಿ ಇನಿಯ ನಿನ್ನ ಬಳಿಗೆ?
ಕರಗಬೇಕೋ ನಿನ್ನ ಪ್ರೀತಿಯೊಳಗೇ!
*****

ಪುಸ್ತಕ: ನಿನಗಾಗೇ ಈ ಹಾಡುಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಬ್ ವೇ
Next post ನಗೆ ಡಂಗುರ – ೯೩

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

cheap jordans|wholesale air max|wholesale jordans|wholesale jewelry|wholesale jerseys