ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ||

ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ
ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ||

ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ,
ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ;
ತನ್ನ ತಾನು ಮರೆತು ಜೊಳ್ಳು ಪುತ್ರರನ್ನು ನಂಬಿರೆ,
ಆತ್ಮಖ್ಯಾತಿ ಘನತೆಗಳನು ಕಳೆದು ತಾಯಿ ನೊಂದಳೊ!  ||ಭಾ||

ಬಡತನದಿ ಬೇನೆಯಿಂದ ಬೆಂದು ಬಳಲಿ ಬಾಡಿತು
ದೇಶದಲ್ಲಿ ಶಾಂತಿ ಕಾಂತಿ ಕಳೆದು ಭ್ರಾಂತಿ ತುಂಬಿತು,
ಹಿಂದೂದೇಶ ಕರ್ಮಭೂಮಿ ಧರ್ಮಕ್ಷೇತ್ರ ಖ್ಯಾತಿಯು
ಶೂರ ಆರ್ಯಜನರ ಸ್ಥೈರ್ಯ ಶೂನ್ಯವಾಗಿ ಪೋದುವೊ!  ||ಭಾ||

ಒಲಿದು ನಲಿದು ಮುಗುಳು ನಗೆಯ ತೋರಿ ಹಾಡಿ ಬರುವಳು
ಹೂವ ಮುಡಿದು ತಿಲಕ ಹಚ್ಚಿ ಧ್ವಜವ ಹಾರ್‍ಸಿ ಮೆರೆವಳು,
ಕಾಲಗೆಜ್ಜೆ ಝಣಽ ಝಣರೆಂದೆನಿಸಿ ಕುಣಿದು ಕರೆವಳು
ನಲಿದಳೀ ನಲ್ವತ್ತು ಕೋಟಿ ಕುರವರರೊಡನೆ ಹರುಷದಿ!  ||ಭಾ||

ಅಹೋ ಏನು ಧಣಿದರವಳ ವೀರ ತ್ಯಾಗಿ ಪುತ್ರರು,
ದೇಶಬಂಧು ಲೋಕಮಾನ್ಯ ಮೋತಿಲಾಲ ಶಿಷ್ಟರು;
ಆ ನೇತಾಜಿ ನೆಹುರು ವಲ್ಲಭಾದಿ ಗೋಕಲೇಯರು,
ದಣಿದು ಕಾದು ಸತ್ತ ಹಿರಿಯ ಕಿರಿಯ ಹಲವು ವೀರರು!  ||ಭಾ||

ರಕ್ತ ಹರಿಸಿ ತನುವ ಸವೆಸಿ ಧಣಿದರಲವು ಜನಗಳು
ಏಸು ಕಾಲ ಪಾರತಂತ್ರ್‍ಯದಿಂದ ಇರ್ದ ದೇಶದೊಳ್;
ಶೂರಗಾಂಧಿ ರಾಜಋಷಿಯು ಬಡವಗೊಲಿದ ದೇವನು
ಸತ್ಯಾಗ್ರಹಾದಾಯುಧವೇ ದೇಶ ವಿಜಯಕಾಯ್ದನು!  ||ಭಾ||

ಬಂದಳದೋ ವಿಜಯಭೇರಿಯನ್ನು ಮೊಳಗಿ ಮಾನಸಿ,
ಗಳಿಸಿದೊಂದು ಕೀರ್ತಿಯನ್ನು ಕಂದರೊಳಗೆ ಹಬ್ಬಿಸಿ;
ಧರೆಯ ರಾಷ್ಟ್ರಗಳಲಿ ನಮ್ಮ ಪ್ರಭೆಯು ಇನ್ನು ಬೀರ್ವುದು,
ಧವಳ ಕೇತು ಹಾರ್‍ಸಿ ತಂದಳದೋ ಭಾರತೀವಧು!  ||ಭಾ||
*****
ಪುಸ್ತಕ: ಸೂರ್ಯ ಕಾಂತಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೫
Next post ಭಾವ ಜೀವ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys