ಅವಳು ಯಾರು?

ಹಸುರು ಸೀರೆಯನುಟ್ಟು ರಂಗು ಬಳೆಗಳ ತೊಟ್ಟು
ತನ್ನ ಗೆಳತಿಯರೊಡನೆ ನಡೆದವಳು ಯಾರು?
ಅರಳಿಯಾ ಮರದಡೀ ಹೂಬುಟ್ಟಿ ಕೆಳಗಿರಿಸಿ
ಚೆಂಡು ಹೂಗಳ ಕೋದು ಹಾಡಿದಳು-ಯಾರು?

ಹಣೆಗೆ ತಿಲಕವನಚ್ಚಿ ಮುಡಿಗೆ ಹೂಗಳ ಮುಚ್ಚಿ
ಮೆಲ್ಲಡಿಯನಿಡುತಿಡುತ ಪೋದವಳು ಯಾರು?
ಜಾರುತಿಹ ಸೆರಗನ್ನು ಎದೆಯಾರೆ ನಿಲ್ಲಿಸುತ
ತನ್ನನ್ನು ತಾನಾಗಿ ನೋಡುವಳು-ಯಾರು?

ಕಡೆಗಣ್ಣು ಉರುಳಿಸುತ ತನುಲತೆಯ ಕೊಂಕಿಸುತ
ನಸುನಾಚುಗೆಯ ತೋರಿ ನಡೆದವಳು ಯಾರು?
ಕೆರೆ ಏರಿ ಕಟ್ಟೆಯಲಿ ಕಾಲ್ತೊಳೆದು ಜಾರಲು
ಬೆರಗಾಗಿ ಆಚೀಚೆ ನೋಡಿದಳು-ಯಾರು?

ಮಣಿಸಾಲು ಕೆಂಪೋಲೆ ಜುಂಜುಮುಕಿ ಕಿವಿಯೋಲೆ
ಮುಂಗುರಿಯ ಮೂಗುತ್ತಿ ಹಾಕಿದಳು-ಯಾರು?
ಕಾವೇರಿ ಜಾತ್ರೆಯಲಿ ಜವ್ವನಿಗ ತಂಡದಲಿ
ತಾನೊಲಿವನಾರೆಂದು ಹುಡುಕಿದಳು-ಯಾರು?

ಫಣಿವೇಣಿ ಆಚೀಚೆ ಒಂಟಿಸರ ಕೊರಳಾಚೆ
ಕಾಲ್ಬಳೆ ಕಿರುಗೆಜ್ಜೆ ಧರಿಸಿದಳು ಯಾರು?
ಕೇರಿ ಹೆಂಗಳ ಸಾಲು ಸರಸವಾಡುತ ತಾನು
ಊರ ಜಾತ್ರೆಗೆ ಅಂದು ಪೋದವಳು ಯಾರು?

ದನಮೇವ ಬಯಲಿನಲಿ ತನ್ನ ತಾಳದ ಹಾಡ
ತೂಗುಯ್ಯಾಲೆ ಹಾಡಿ, ಹಾಡಿದಳು-ಯಾರು?
ಕೆಂಬಕ್ಕಿ ಶುಕ ಪಿಕ ಮಲ್ಲಳಿಯ ಹಾಡುಗಳ
ಕೇಳುತಲೆ ತಾನಾಗಿ ನಲಿದವಳು ಯಾರು?

ಕೊಡಪಾನ ನೀರೊಡನೆ ಘುಳುಗುಳು ಮಾತಾಡಿ
ಮೆಟ್ಟಲಲಿ ರಂಗೋಲಿ ಬಿಡಿಸಿದಳು-ಯಾರು?
ಹಸುರಾಂತ ವನಶೋಭೆ ತಾನುಟ್ಟ ಹಸುರುಡಿಗೆ
ಒಂದಾಗಲಿಲ್ಲೆಂದು ಅಂದವಳು ಯಾರು?

ಪೂರ್ಣಚಂದ್ರನ ಚೆಲುವು ಕಂಡು ತನ್ನಯ ರೂಪು
ಅಂತಾಗಲಿಲ್ಲೆಂದು ಗೊಣಗಿದಳು-ಯಾರು?
ತನ್ನ ಅಪ್ಪನ ಮಾಂವ ಎಂದು ತಾ ಕರೆವವನು
ಯಾರಿರುವನೋ ಎಂದು ನೆನೆಸಿದಳು ಯಾರು?
*****

ಪುಸ್ತಕ: ಸೂರ್ಯ ಕಾಂತಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೭
Next post ೨೬-೧-೫೦

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys