ಭಾವ ಜೀವ

ಭೋರ್ಗರೆದು ಬರಸೆಳೆದು ಬಿರುಸಿನಲಿ ಚಿಮ್ಮೆಸೆದು
ಗಿರಗಿರನೆ ಸುರುಳಿಯಲಿ ಸೊರಗಿಸುವ ಸುಳಿಗಳಲಿ
ಸಿಕ್ಕಿದಂತೊಮ್ಮೊಮ್ಮೆ ಹೃದಯ ಬಲು ತಪಿಸುವುದು!
ನಭಕೇರಿ ಕೆಳಗುರುಳಿ ಭಾವಗಳ ಕಡಲಿನಲಿ
ಮಿಂದು ಮೈ ಬೆಂಡಾಗಿ ಬಸವಳಿದು ಬೀಳುವುದು!
ಮರು ನಿಮಿಷ ಮೆಲ್ಲೆಲರು ಮೃದು ಮಧುರ ನುಡಿಗಳಲಿ
ಮೆಲ್ಲಮೆಲ್ಲನೆ ಕರೆದು ಬೇರೊಂದ ತೋರುವುದು!
ಶಾಂತಿಯುಂಟೇನಿಲ್ಲಿ ಬರಿ ಭಾವ ಜೀವದಲಿ?

ಮೀನಮೇಷಗಳೆಣಿಸಿ, ಕಾಲಕಾರ್ಯವ ಗುಣಿಸಿ
ಕಾರ್ಖಾನೆಯಚ್ಚಂತೆ ಮಾಡಿ ಜೀವನವೆಲ್ಲ
ಕಾಣದಂತೆಯೆ ಮತ್ತೆ ಸಾಗಿಹೋಗುವರೆಲ್ಲ!
ಹೊಸತಿಲ್ಲ-ಹಳತಿಲ್ಲ-ಜೀವ ನಿತ್ಯದ ದಿನಸಿ!
ಇಂಥ ಬಾಳದು ಬಾಳೆ?-ಭಾವಜೀವವೆ ಮೇಲು!
ಕಹಿಸಿಹಿಗಳೆಲ್ಲವಿದೆ! ಅದಕಿಂತ ಬೇರೇನು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)
Next post ಚಿಂತೆಗೆ ಕಣ್ಣತೆತ್ತವಳೆ!!

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

cheap jordans|wholesale air max|wholesale jordans|wholesale jewelry|wholesale jerseys