ಚಂದ್ರ ನೀನೊಬ್ಬನೆ

ಉರಿಯಿಲ್ಲ ಬಿಸಿಯಿಲ್ಲ
ಉರಿಬಿಸಿಲ ಬೇಗೆ ಬವಣೆಗಳಿಲ್ಲ
ಕಿಡಿಸಿಡಿವ ಕೆಂಡದುಂಡೆಯಂತುದಯಕ್ಕೆ
ಅಸ್ತಕ್ಕೆ ರಕ್ತದೋಕುಳಿಯಿಲ್ಲ
ಅವನಂತೆ ನಿಂತಲ್ಲೇ ನಿಂತು ಜಗವೆಲ್ಲ ತನ್ನನ್ನೇ ಸುತ್ತಿ
ಠಳಾಯಿಸಲೆಂಬ ಠೇಂಕಾರದವನಲ್ಲ.
ಏನಾದರೂ ಹೋದರು ಲೆಖ್ಖಿಸಿದೆ ಬೆಳಗು ಬೈಗಿನ ಕಾಲಚಕ್ರದ
ನಿಷ್ಠುರಕ್ಕೆ ನಿಷ್ಠನಾಗಿ ಸದಾ ಹೊತ್ತಿಕೊಂಡುರಿವ ಅಮಾನುಷನಲ್ಲ
ಅಹರ್ನಿಶಿ ನಮ್ಮ ಸುತ್ತ ಪ್ರೀತಿಯಲಿ ಸುತ್ತುತ್ತಲೇ ಇರುವ
ಪರಿವೀಕ್ಷಕ ನಿರಂತರ ಪರಿಕ್ರಮದ ಸಜೀವ ಮಾನುಷ್ಯಕಾಯ
ಈ ಇಳೆಯ ನಿಜಗೆಳೆಯ ಅಜಾತ ಶತ್ರು; ಲಕ್ಷ ನಕ್ಷತ್ರಗಳ
ರಾಜಾಧಿರಾಜ.

ಓ ಮನಃಕಾರಕನೇ
ಮನುಜನೊಳಗಿನ ಮನಸು
ನೂರಾರು ಕನಸು ಪ್ರೀತಿ ಪ್ರೇಮ

ನಿನ್ನದೇ ಸೋಮ, ನಮ್ಮೊಳಗಿನೆಲ್ಲ ಚಿತ್ರ ವಿಚಿತ್ರ ಬಯಕೆ ಕಾಮ.
ಧೀಶಕ್ತಿ, ಚಿತ್ರ ವೃತ್ತಿ, ಅನುರಕ್ತಿ ತೃಪ್ತಿ ಸಂತುಷ್ಟಿ
ಭಾವ ರಾಗ ಅನುರಾಗ ಭಾವಾವೇಶ
ಅನ್ಯೊನ್ಯದನುಬಂಧ, ಆತ್ಮೀಯದೊಲುಮೆ ಮೈತ್ರಿಬಾಂಧವ್ಯ

ಭೂಮಿಯೊಳಗಣ ನೀರು
ಸಸ್ಯ ಔಷಧ ವನಸ್ಪತಿ
ಜ್ಞಾನ, ವಿಜ್ಞಾನ ರಸ ರಸಾಯನ ಋತುಮಾನದಧಿಪತಿ

ಎಂದೆಂದೂ ಆರದಂತಮೃತದೆಣ್ಣೆಯನೆರೆದು
ಬೆಣ್ಣೆಮುದ್ದೆಯ ಒಳಗೆ ಯಾರೋ ಹಚ್ಚಿ ಬಚ್ಚಿಟ್ಟ
ಆಕಾಶದದ್ಭುತ ದೀಪ, ನೀನು ಓ ತಿಂಗಳು
ತಂಗಳು ಕೈತುತ್ತಿನನ್ನಕ್ಕು ಇನ್ನಿರದ ರುಚಿಕೊಡುವ
ನಿನ್ನ ಬೆಳ್ಳಿ ಬೆಳದಿಂಗಳು.

ಮಧು ನಿನ್ನದು; ಮುದ ನಿನ್ನದು
ನಿನ್ನದೇ ಅದು; ಗಂಡು ಹೆಣ್ಣುಗಳ ಹೃದಯ
ಕವಾಟಗಳ ಕದ ತೆಗೆವ ಮಧುಚಂದ್ರ.

ವೃದ್ಧಿ ಕ್ಷಯ, ಭರತ ಕುಸಿತ, ಏರಿಳಿತ
ಎಲ್ಲ ನಮ್ಮಂತೆಯೇ ಅನ್ನು;
ಎಂದಮಾತ್ರಕ್ಕೆ ಓ ಚಗಚ್ಚಕ್ಷುವೇ
ದೇವರಲ್ಲವೆನ್ನುವರುಂಟೇ ನಿನ್ನನ್ನು
ಇರಬಹುದು ಬಿಡು ಸೂರ್ಯ ಅವನೊಬ್ಬನೆ
ಆದರೆ ಓ ಇಂದುವೇ, ಪೃಥ್ವಿಗತಿಸನಿಹದ ಬಂಧುವೇ
ಇಂದು, ಮುಂದು, ಎಂದೆಂದೂ,
ನಮಗೆ ನಮ್ಮ ಪ್ರೀತಿಯ ಚಂದ್ರ ನೀನೊಬ್ಬನೆ
ಚಂದ್ರನೆಂಬುವನೊಬ್ಬನೆ
ಚಂದ್ರ ನೀನೊಬ್ಬನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಮ್ಮನ ಮುನಿಸು
Next post ನಟ್ಟಿರುಳಿನಲ್ಲೊಂದು ಸಂವಾದ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

cheap jordans|wholesale air max|wholesale jordans|wholesale jewelry|wholesale jerseys