ನನ್ನೊಳಗ ನಾ ತಿಳಕೊಂಡೆ

ನನ್ನೊಳಗ ನಾ ತಿಳಕೊಂಡೆ
ನನಗ ಬೇಕಾದ ಗಂಡನ್ನ ಮಾಡಿಕೊಂಡೆ   ||ಪ||

ಆಜ್ಞಾಪ್ರಕಾರ ನಡಕೊಂಡೆ
ನಾ ಎಲ್ಲಾರ ಹಂಗೊಂದು ಹರಕೊಂಡೆ      ||ಅ.ಪ.||

ಆರು ಮಕ್ಕಳನಡುವಿಗಟ್ಟಿ
ಮೂರು ಮಕ್ಕಳ ಬಿಟ್ಟಗೊಟ್ಟೆ
ಇವನ ಮೇಲೆ ಮನವಿಟ್ಟೆ
ಎನ್ನ ಬದುಕು ಬಾಳೆವೆಲ್ಲಾ ಬಿಟ್ಟಗೊಟ್ಟೆ   ||೧||

ಒಂದನಾಡಿದರೆ ಕಡಿಮೆಯೆಂದೆ
ಮತ್ತೆರಡನಾಡಿದರೆ ಹೆಚ್ಚೆಂದೆ
ಬೆಡಗ ಮಾತಿದು ನಿಜವೈತೆಂದೆ
ಇದು ಸುಜ್ಞಾನಿಗಳಿಗೇ ತಿಳಿತೆಂದೆ       ||೨||

ಶಿವಶಿವಾಯೆಂಬ ಹಾದಿ ಬೇಡಿಕೊಂಡೆ
ಗುರೂಪದೇಶವ ಪಡಕೊಂಡೆ
ಈ ಭವಕೆ ಬಾರದಂತೆ ಮಾಡಿಕೊಂಡೆ
ಗುರುಗೋವಿಂದನ ಪಾದಾ ಹಿಡಕೊಂಡೆ       ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರುಧ್ಯಾನವ ಮಾಡಿದಿ
Next post ಗುರುನಾಥಾ ರಕ್ಷಿಸೋ

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys