ತಾಯಂದಿರಿಗೆ

ತಾಯಂದಿರೇ
ಹುಟ್ಟುತ್ತಲೇ ಯಾರೂ
ಕರ್ಣಕುಂಡಲ ಜಟೆ ಗಡ್ಡ ಮೀಸೆಗಳ
ಪಡೆದುಕೊಂಡೇ ಬರುವುದಿಲ್ಲ
ಹುಟ್ಟುತ್ತಲೇ ವೇದಾದಿಗಳು
ಯಾರ ನಾಲಿಗೆಯ ಮೇಲೂ ನರ್ತಿಸುವುದಿಲ್ಲ
ಹುಟ್ಟಿ ಬಂದ ಕುಲ
ಕುಂದು ದೋಷ ವೃತ್ತಿಗಳೆಲ್ಲ
ಶಿಲಾ ಶಾಸನವೇನಲ್ಲ
ಇದನ್ನು ಬರೆದಿಟ್ಟುಕೊಳ್ಳಿ

ಇಂಥ ಕರಿ ಮೋಡಗಳು ನಿಮ್ಮ ಸೂರ್ಯರಿಗೆ
ಬಾಲಾರಿಷ್ಟರಾಗಿ ಬಡಿದುಕೊಂಡಿರಬಹುದು
ಇದರಿಂದ ನಿಮ್ಮ ಕರುಳಕಿಡಿಗಳು
ಇದ್ದಿಲ ಚೂರುಗಳಂತೆ ಭಾಸವಾಗಬಹುದು
ಆದರೆ ತಾಯಂದಿರೆ
ಆ ಬಾಲಾರಿಷ್ಟ ಗ್ರಹ ಬಾಧೆಗಳ
ನಿಮ್ಮ ಚೈತನ್ಯ ಬೆಂಕಿಯಿಂದ ಸುಡಿರಿ
ಭವಿಷ್ಯದ ಆಶಾ ಮಾರುತನಿಂದ ಝಾಡಿಸಿರಿ
ನಿಮ್ಮ ಇದ್ದಿಲ ಚೂರನ್ನೇ ಗಟ್ಟಿ ಮಾಡಿ ಮಾಡಿ
ಸಾಣೆ ಹಿಡಿದು ವಜ್ರ ಮಾಡುವ
ಸಾಣೆಯಂತ್ರ ನಿಮ್ಮ ಕೈಯಲ್ಲೇ ಇದೆ
ನಿಮ್ಮ ಸೊಂಟಕ್ಕಂಟಿದ ಉಪಗ್ರಹಗಳಿಗೆ
ಕಾವು ಕಸುವು ತುಂಬಿ ತುಂಬಿ
ಸ್ವಯಂ ತೇಜೋಮೂರ್ತಿ ಮಾಡುವ
ಮಾಯಾ ದಂಡವೂ ನಿಮ್ಮ ಕೈಯಲ್ಲೇ ಇದೆ
ಇದನ್ನು ನಂಬಿ|
ನಿಮ್ಮ ಮನೆಗೋಡೆಯ ಮೇಲೆ
ಬರೆದಿಟ್ಟು ಬಣ್ಣ ತುಂಬಿ
ಗ್ರಹವು ಸೂರ್ಯನಾಗುವುದನ್ನು
ಹುಳುವು ಸಿಂಹವಾಗುವುದನ್ನು
ಈ ದೇಶ ಕಳ್ಳಕತ್ತಲೆ ಎಂದೂ ಸಹಿಸದು
ಎಲ್ಲ ಕಡೆ ಬೆಳಕಾದರೆ ಬಾವಲಿ ಹೆಗ್ಗಣ
ದರೋಡೆಖೋರ ನಿಶಾಚರರಿಗೆ ಅನುಕೂಲವಾಗದು

ಎಲ್ಲಾದರೂಂದೊಂದು ಕಿಡಿ ಹೊತ್ತಿಕೊಂಡರೆ
ಅಗ್ನಿ ಸತ್ಯ ಮೂಡಿದರೆ
ಕರಿನೆರಳ ಬುಟ್ಟಿ ಬೋರಲು ಹಾಕಿ ಬಿಡುವುದು
ಇಲ್ಲಿಯ ಚರಿತ್ರಾಹೀನ ಚರಿತ್ರೆ

ಸೂರ್ಯನ ಸೃಷ್ಟಿಸುವ
ಸಾಣೆಯಂತ್ರವನ್ನು ಕಸಿದುಕೊಂಡು,
ನಿಮಗೆ ಕೇವಲ ಸೌಟು ಕೊಟ್ಟಿರುವುದು
ಇಂಥ ಚರಿತ್ರಯೇ

ಆದ್ದರಿಂದ ತಾಯಂದಿರೇ
ನಿಮ್ಮ ಕರುಳ ಕುಡಿಗಳಲ್ಲಿ
ಕಿಡಿ ಹೊತ್ತಿಸಿ ಅಗ್ನಿ ಪುಂಜಗಳಾಗಿ ಮಾಡಿ
ಕತ್ತಲೆಯೋಡಿಸುವ ಕಜ್ಜದಲ್ಲಿ ಕೈಗೂಡಿ

೧೨-೬-೮೬
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೆಡ್ಡಾ ಹಾಗೂ ನಮ್ಮ ಕಿರು ಪ್ರಪಂಚ
Next post ಇಂಜೆಕ್ಷನ್ ನೀರಿನಲ್ಲಿ ಸೋಂಕು

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

cheap jordans|wholesale air max|wholesale jordans|wholesale jewelry|wholesale jerseys