ಎಲ್ಲಿದೆ ಧರ್ಮ

ಧರ್ಮಾ ಧರ್ಮಾ ಅಂತಾರೋ ಎಲ್ಲಿದೆ ಧರ್ಮಾ ತೋರಿಸರೋ ||ಪ||
ನಮ್ಮದು ಧರ್ಮಾ ನಿಮ್ಮದು ಧರ್ಮಾ ಅವರದು ಧರ್ಮಾ ಅಂತಾರೆ
ಜನಗಳ ನಡುವೆ ಗೋಡೆಗಳೆಬ್ಬಿಸಿ ಆಗಸ ಕಾಣದೆ ನಿಂತಾರೆ ||೧||

ಕೊಂಬಿ ರೆಂಬಿಗಳ ಜೋತು ಬಿದ್ದು ಅವುಗಳೆ ಮರ ಮರ ಅಂತಾರೆ
ಬೊಡ್ಡೆಗೆ ಕೊಡಲಿ ಹಾಕುತಲಿದ್ದು ಕೊಂಬೆ ಚಿಗುರಿದವು ಅಂತಾರೆ ||೨||

ನೆಲದಲಿ ಹುಟ್ಟಿದ ಗಿಡಗಳ ಕಿತ್ತುತ ಅಂತರ ಬೆಂತರ ಬೆಳೆಸ್ಯಾರೆ
ಮಣ್ಣೂ ನೀರೂ ತುಳಿದೂ ಹಳಿದೂ ರೊಕ್ಕದಿ ಗಿಡಗಳ ಇಳಿಸ್ಯಾರೆ ||೩||

ಜೀವನ ಮೂಲದಿ ಹೊಮ್ಮಿದ ನಾದದ ಕೋಗಿಲೆ ಕೊರಳನು ಹಿಚಿಕ್ಯಾರೆ
ಸಮಗ್ರ ಬದುಕಿನ ಸುರ ಸಂಗೀತದ ತಂತು ತಂತುಗಳ ತಿರಿಚ್ಯಾರೆ ||೪||

ಬಯಲು ಆಲಯದ ಹಿಡಿಯದ ಲೀಲೆಯ ಗೂಡುಗಳಲಿ ಹಿಡಿದಿಟ್ಟಾರೆ
ಆಕಾರಿಲ್ಲದ ಅಗಮ್ಯ ಗೂಢಕೆ ತೋಚಿದ ಆಕೃತಿ ಕೊಟ್ಟಾರೆ ||೫||

ಹಾಲೂ ಇಲ್ಲಾ ಬಟ್ಟಲು ಇಲ್ಲಾ ಗೊಟಕ್ಕು ಪೂಜೆಯ ಮಾಡ್ಯಾರೆ
ವೇಷ ಮೋಸಗಳ ಕಳ್ಳ ಬಸಿರುಗಳು ಉಬ್ಬಿದ ಅಬ್ಬರ ಮೆರೆಸ್ಯಾರೆ ||೬||

ಝಣ ಝಣ ರೊಕ್ಕದ ಗಂಟೆ ಭೇರಿಗಳ ನಾದದ ಕೇಳುವ ಧರ್ಮಗಳು
ಹಸಿದ ಕೂಸುಗಳ ನೊಂದ ಜೀವಿಗಳ ಕೂಗು ಕೇಳದಾ ಕಿವುಡುಗಳು ||೭||

ಬಣ್ಣ ಬಟ್ಟೆಗಳು ಮಹಲು ಮೆರಗುಗಳು ಮಾತ್ರ ಕಾಣುವವು ಅವುಗಳಿಗೆ
ಹರಕು ಬಟ್ಟೆಗಳು ದುಡಿವ ರಟ್ಟೆಗಳು ಕಾಣದ ಕುರುಡಿದೆ ಅವುಗಳಿಗೆ ||೮||

***

ನಾಮಾ ವಿಭೂತಿಗಳಲ್ಲಿ ಇರುವುದೇ
ಜನಿವಾರ ಜುಟ್ಟುಗಳಲಿದೆಯೇ?
ಗುಡಿಗೋಪುರದಲಿ ಬಸದಿಯಲಿರುವುದೆ
ಮಸೀದಿ ಗೋಡೆಗಳೊಳಗಿದೆಯೇ? ||೯||

ಗುಡಿಗಳ ಒಳಗಿನ ಕಲ್ಲು ಲೋಹಗಳ
ವಿಧ ವಿಧ ವಿಗ್ರಹಗಳಲಿದೆಯೇ?
ನಾಮ ಪಠಣದಲಿ ಜಪಮಾಲೆಗಳಲಿ
ಯಜ್ಞ ಯಾಗಗಳಲಡಗಿದೆಯೇ? ||೧೦||

ಮಡಿಮೈಲಿಗೆಯಲಿ ವ್ರತನೇಮಗಳಲಿ
ಮೂಡ ಭಕ್ತಿಯಲಿ ಕುಳಿತಿದೆಯೇ?
ಊಹಾ ಮೃಗಜಲ ಪುರಾಣ ಕತೆಗಳ
ಶಾಸ್ತ್ರಗಳಡವಿಗಳೊಳಗಿದೆಯೇ? ||೧೧||

ಮಠಗಳ ಸಿಂಹಾಸನಗಳ ಮೇಲೆ
ಛತ್ರ ಚವರಿಗಳ ತಂಪಿನಲಿ
ಪಲ್ಲಕ್ಕಿಗಳಲಿ ಅಟ್ಟಹಾಸದಲಿ
ಮೆರೆಯುತಲಿದೆಯೇ ಸೊಂಪಿನಲಿ? ||೧೨||

****

ಎಲ್ಲಿದೆ ಧರ್ಮಾ ಯಾವುದು ಧರ್ಮಾ
ಏನದು ಧರ್ಮಾ ತೋರಿಸಿರೊ
ಬೆಳಕನು ಹರಡಲು ಹುಟ್ಟಿದ ಧರ್ಮವು
ಕತ್ತಲೆಯನೆ ಹಬ್ಬಿಸದಿರಲಿ ||೧೩||

ಜ್ಞಾನ ದೀವಿಗೆಯು ಮೌಢ್ಯ ಕಂದಕದಿ
ಉಸಿರು ಕಟ್ಟದೆಯೆ ಬದುಕಿರಲಿ
ಮಾನವರೆಲ್ಲರ ಕೂಡಿಸುವ ಬದಲು
ಭೇದಿಸಿ ಕೊಲ್ಲದ ಹಾಗಿರಲಿ
ಮಾನವತೆಯ ಆ ಮೂಲ ಬೇರಿನಲಿ
ತನ್ನಯ ಸಾರವ ಹೀರಿರಲಿ ||೧೪||
********

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಭಾ ಪ್ರವಾಸ
Next post ಫ್ರಿಜ್ ನ ಒಳ ಹೊರಗು

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys