ನಳಿನಾಕ್ಷಿಯ ಕಂಡೆ ನಾ

ನಳಿನಾಕ್ಷಿಯ ಕಂಡೆ ನಾ
ತಿಳವಳ್ಳಿಯ ಕಳಿಯುಳ್ಳ ಮೋಜಿನ್ಹೆಣ್ಣ
ಹೊಳಿವ ಚಂದುಟಿ ಎಳಿವ ಮುಡಿ
ಥಳ ಥಳ ಪದಕ ಒಪ್ಪಿನ ಜಾಣೆ
ತನ್ನ ಕಲಶ ಕುಚಯುಗದಲಿ
ಸರಿಯ ಗರತಿಯರೋಳು ಮೇಲ್ ||೧||

ಕುಸುಮಶರನ ರಾಣಿಯೋ
ಕೊರಳೆಸೆವ ಪಲ್ಲವ ಪಾಣಿಯೋ
ಬಿಸಿಜಿಕೊರಕ ಸ್ಥಾನವೋ
ಯೋಚಿಸಿ ರೂಪ ಮಧುರ ಪಲ್ಲವ ಪಾಣಿಯೋ
ವಸುಧಿಯೊಳು ಕಡುಜಾಣ ರೀತಿಯ
ಕುಶಲ ರತಿಯಲೆ ಕೂಡಿದ್ಹೇಳ್
ಅಸು ನೀಗದೆ ಬಿಡರು ಎಮ್ಮನು
ಮಸಣಿಸಿ ಮುಂದೆ ಹೋಗಲೊಲ್ಲದು ||೨||

ಸರಳ ಬೈತಲಿ ಮರನ ಸಿಂಗಾಡಿಯು
ತೀಡಿ ಪೊರ್ಬಿನ ಕೊರಳೊಳ್
ಹಾರ ಮುತ್ತಿನ ರತ್ನಗಳಿಂದ ಮೆರೆಯುತಿಹುದು ಒಡ್ಡ್ಯಾಣ
ತರುಣಿ ಕರ್ಣದೊಳಿಟ್ಟು ಆಭರಣ
ಅಪರಿಮಿತ ಇನ್ನೆಷ್ಟು ಹೇಳಲಿ
ನೆರೆದ ಜನರ್ಬಾಯ್ದೆರೆವರೀಕೆಯ
ತುರುಬ ಚಲ್ವಿಕೆಗೆ ಮರುಳಗೊಂಡರು ||೩||

ಹವಳದುಟಿಯ ಬಾವಲಿಯು
ಕುವಲನೇತ್ರ ದಿವಿಜಲೋಕದ ಸ್ತ್ರೀ
ಅಯ್ಯಯ್ಯೋ ನವಮೋಹನದ ನಿಧಿಯು
ಭವದ ಅಜನ ಪಟ್ಟದ ರಾಣಿಯು
ಶಿವಶಿವಾ ಹೆಣ್ಣಿವಳ ರೂಪಕ
ಅವನೀಪತಿ ಕಡೆಯಿಲ್ಲ ದೇವರು
ಪವನಸುತ ಘನರೂಪ ಮಾರುತಿ
ಅವನ ಬಲದಿಂದುಳಿದೆನು ಜವದಿ ||೪||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಓದುವವ್ಗ ಎಚ್ಚರ ಇರಬೇಕು
Next post ಹೇಮರೆಡ್ಡಿ ಮಲ್ಲಮ್ಮ

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys