ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಅಶಕ್ತರೋಗಿಗಳಿಗೆ, ಅಥವಾ ಗಂಭೀರ ಕಾಯಿಲೆ ಇದ್ದವರಿಗೆ ರಕ್ತವನ್ನು ಕೊಡುವುದು ಅನಿವಾರ್ಯವಾಗಿರುತ್ತದೆ. ಆದರೆ ರೋಗಿಗೆ ಸರಿ ಹೊಂದುವ ರಕ್ತದ ಕೊರತೆ ಒಂದೆಡೆಯಾದರೆ ರಕ್ತದ ವಿರಳತೆಯಿಂದಾಗಿ ಕೊಡಲಾಗದೇ ರೋಗಿ ಸಾಯಬೇಕಾಗುತ್ತದೆ ಅಥವಾ ಸಹಸ್ರಾರು ರೂ.ಗಳನ್ನು ಸುರಿದು (Blood Bank) ನಲ್ಲಿ ರಕ್ತ ತಂದು ಪೂರೈಸ- ಬೇಕಾಗುತ್ತದೆ. ಇದೆಲ್ಲ ಕಷ್ಟಕರವಾದ ಕೆಲಸವೆ. ಆದರೆ ತಂತ್ರಜ್ಞಾನದಿಂದ ರಕ್ತವೂ ಸೃಷ್ಟಿಯಾಗಿ  ಬೇಕಾದವರಿಗೆ ಅಂಗಡಿಯಲ್ಲಿ ಸಿಗುವಂತಾದರೆ ಅದಕ್ಕಿಂತಲೂ ಇನ್ನೇನು ಬೇಕು. ರೋಗಿಯ ಪುಣ್ಯ ರಕ್ತಕ್ಕಾಗಿ ಅಲೆಯುವ ಸಮಸ್ಯೆಯೇ ಇರಲಾರದು. ಇಂತಹ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ‘ವಿಟ್‌ವೈಸ್’ ಎಂಬ ವಿಜ್ಞಾನಿ ಜೈವ ತಂತ್ರಜ್ಞಾನ ಸಾಧನೆಯಿಂದ ರಕ್ತದ ಸೃಷ್ಟಿಯನ್ನು ಕಂಡು ಹಿಡಿದರು. ಕೆಂಬ್ರಿಡ್ಜ್ ಮಸಾಚುಸೆಟ್ಟ್‌ನಲ್ಲಿರುವ  ಆಂಟೋಜೆನಿ ಎಂಬ ಜೈವ ತಾಂತ್ರಿಕ ಸಂಸ್ಥೆಯಲ್ಲಿ ಸಂಶೋಧಕ ವ್ಶೆದ್ಯರಾಗಿ ಇವರು ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಪಥಮವಾಗಿ ಆದಿಕೋಶಗಳನ್ನು ಗುರುತಿಸಿ, ಪ್ರತ್ಯೇಕಿಸಿ ಪ್ರಯೋಗಾಲಯದ ಪ್ಲಾಸ್ಟಿಕ್ ತಟ್ಟೆಯೊಂದರಲ್ಲಿ ಅವನ್ನು ಬಿತ್ತಿದರು. ಅವಕ್ಕೆ ಪೋಶಾಕಾಂಶಗಳನ್ನು ಒದಗಿಸಿದರು. ಸೂಕ್ತಜನಕಾಣುಗಳನ್ನು ಪೂರೈಸಿದರು. ಕೆಲವೇ ದಿನಗಳಲ್ಲಿ ನಿಬ್ಬೆರಗಿನ ಫಲಿತಾಂಶವನ್ನು ನೋಡಿ ಕುಣಿದಾಡಿದರು. ಆದಿಕೋಶವು ಕೆಂಗಣಗಳನ್ನು ಉತ್ಪಾದಿಸಲಾಂಭಿಸಿತು. ರಕ್ತವು ಸ್ಪಷ್ಟಿಯಾಯಿತು. ಈ. ಸೂತ್ರವನ್ನು ಅನುಸರಿಸಿ ಸಂಶೋಧಕರು ರಕ್ತವನ್ನು ಸೃಷ್ಟಿಸಿ ಅಶಕ್ತ ರೋಗಿಗಳಿಗೆ ಈ ರಕ್ತವನ್ನು ಪೂರೈಸುತ್ತಾರೆ ಎಂಬ ದಿನಗಳು ಬರುತ್ತವೆ !

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿಯ ದೀಪವ ಎದೆಯ ಬೆಳಗಿ
Next post ಆರಂಕುಶಮಿಟ್ಟೊಡಂ

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys