ಹೇಮರೆಡ್ಡಿ ಮಲ್ಲಮ್ಮ

ಹೇಮರೆಡ್ಡಿ ಮಲ್ಲಮ್ಮ
ರೆಡ್ಡಿಕುಲಧರ್ಮ ಉದ್ಧಾರಮಾಡಿದೆಯಮ್ಮಾ || ಪ ||

ನಿನ್ನ ಭಕ್ತಿಭಾಗ್ಯದ ನೇಮ
ಮಲ್ಲಯ್ಯನ ಕಟ್ಟಿದ ಪ್ರೇಮ
ಶ್ರೇಷ್ಟವಾಗಿ ತೋರುವದು ರಡ್ಡಿಕುಲಧರ್ಮ
ಶ್ರೀಶೈಲ ನಿನಗಾಗಿದೆ ಕಾಯಮ್ಮ ||ಅ.ಪ.||

ನಿನ್ನ ಕಷ್ಟ ದುಃಖ ಹೇಳಲಾರೆನಮ್ಮ
ಗಂಡನ ಮೇಲೆ ಪ್ರೇಮ
ಹೊತ್ತಿಗಂಬಲಿ ಸಿಗಲಿಲ್ಲವಮ್ಮ
ಮಣ್ಣು ಪಾತ್ರೆ ಮಜ್ಜಿಗೆ ನೇಮ
ಮಲ್ಲಯ್ಯನು ಪಾಲುಗಾರನಮ್ಮ
ಉಂಡುಹೋದ ಉಳಿಯಲಿಲ್ಲವಮ್ಮ ||೧||

ನೀ ಬೀಸುದು ನೇಮ ದಿನ ದಿನ ಕಾಯಮ
ಕೈಯಲ್ಲಿ ಗುರುಳೆಮ್ಮ
ಬೀಸಿಹೋದ ಭಕ್ತಳಮ್ಮ
ಭಕ್ತಿಗೊಲಿದು ಬಂದನು ಜಂಗಮ
ಭಿಕ್ಷೆ ಬೇಡಿ ನಿಂತ ನೋಡಮ್ಮ
ಬಿಡದ ನುಚ್ಚುನೇಗರನಮ್ಮ ||೨||

ನಿನ್ನ ಮೂಗುತಿ ಮರ್ಮ
ತಿಳಿಲಿಲ್ಲ ಹೇಮ ಬೇಡಿ ಒಯ್ದನಮ್ಮ
ಶಿಶುನಾಳ ಊರು ಗ್ರಾಮ
ಗುರುಗೋವಿಂದನ ನಾಮ
ಆತನ ಪಾದಸೇವೆ
ನಂಬಿ ನಾನು ಮಾಡಿದೆನಮ್ಮ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಳಿನಾಕ್ಷಿಯ ಕಂಡೆ ನಾ
Next post ನೋಡಿ ತಡೆಯಲಾರದೆ ಕೇಳಿದೆ

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

cheap jordans|wholesale air max|wholesale jordans|wholesale jewelry|wholesale jerseys