ಮುಖಾಮುಖಿ


ಪುಷ್ಟವಾದ ಒಂದು ಬೆಕ್ಕು ನನ್ನ ಮನೆಯ
ಡ್ರಾಯಿಂಗ್ ರೂಮಿನಲ್ಲಿ ಬಂದು ನನ್ನನ್ನು ಕಂಡು
ಹಠಾತ್ತನೆ ನಿಂತಿತು.  ಅಲ್ಲಿ ಅದು ನನ್ನನ್ನು ನಿರೀಕ್ಷಿಸಿರಲಾರದು.
ಇಲ್ಲ, ಸೋಮವಾರ ಎಲ್ಲರೂ ಅವರವರ ಆಫೀಸಿಗೆ
ಹೋಗಿರುವ ಅಪರಾಹ್ನವಂತೂ ಖಂಡಿತ ಇಲ್ಲ.
ತುಸು ಅಸಮಾಧಾನದಿಂದ ನನ್ನ ಕಡೆ ನೋಡಿತು.
ನಮ್ಮ ಕಣ್ಣುಗಳು ಪರಸ್ಪರ ನಟ್ಟು ಯಾರು ಮೊದಲು
ಮುಖ ತಿರುಗಿಸುವುದು ಎಂಬ ಒಂದು ವಿಧ
ಅಘೋಷಿತ ಯುದ್ಧದಲ್ಲಿ ಇಬ್ಬರೂ ತೊಡಗಿದೆವು.
ಒಂದು ಬೆಕ್ಕಿನ ಕಣ್ಣುಗಳು ಇಷ್ಟು ನಿಶ್ಚಲವಾಗಿರುತ್ತವೆ
ಎಂದು ನನಗೆ ಗೊತ್ತಿರಲಿಲ್ಲ.


ಸೆಟೆದ ಬಾಲ, ನಿಮಿರಿದ ಕೂದಲು, ಊರಿದ ಕಾಲುಗುರು-
ಒಟ್ಟಾರೆ ಹೂಡಿದ ಬಿಲ್ಲಿನಂತಿರುವ ಬೆಕ್ಕು
ಆಕ್ರಮಿಸಿತ್ತೀಗ ನನ್ನ ಇಡೀ ದೃಷ್ಟಿ ಪರಿಧಿಯನ್ನು-
ದಾರಿತಪ್ಪಿದಂತೆ ನಾನು ಚರಿತ್ರಪೂರ್ವ ಭೂಖಂಡಗಳಲ್ಲಿ
ಬಿದ್ದಂತೆ ಅಪರಿಚಿತ ಸಮುದ್ರಗಳಲ್ಲಿ.  ಆದರೂ
ಎವೆಯಿಕ್ಕಲಿಲ್ಲ ನಾನು.  ಎವೆಯಿಕ್ಕಲಿಲ್ಲ ಬೆಕ್ಕು.
ಮನುಷ್ಯ ಮತ್ತು ಮೃಗಕ್ಕೆ ಮೂಲಭೂತವಾದ
ಯಾವದೋ ಸ್ಥಿತಿವಿಶೇಷದಲ್ಲಿ ನಿಂತಿತ್ತು ನನ್ನೆದುರು
ಬೆಕ್ಕಿಗೆ ಬೆಕ್ಕೇ ಛಲವಾಗಿ.
ಒಂದು ಬೆಕ್ಕಿನ ಕಣ್ಣುಗಳು ಇಷ್ಟು ಅನಾಥವಾಗಿರುತ್ತವೆ
ಎಂದು ನನಗೆ ಗೊತ್ತಿರಲಿಲ್ಲ.


ಕೊನೆಗೂ ಸೋತದ್ದು ಮೃಗವೆ.  ಅಥವಾ ಹಾಗೆಂದುಕೊಂಡುದು
ನಾನು.  ಆ ಸೆಟೆದ ಮೈ ಕ್ರಮೇಣ ನುಸುಲಾಗಿ
ಹೊರಟು ಹೋಯಿತು ಬೆಕ್ಕು ಬೆಕ್ಕಿನ ಗತಿಯಲ್ಲಿ.
ಹೀಗೆ ನನ್ನ ದೃಷ್ಟಿ ಒಮ್ಮೆಲೆ ಖಾಲಿಯಾದಾಗ
ಅನಿಸಿತು ನನಗೆ-ಒಪ್ಪಿಕೊಳ್ಳಬಹುದಿತ್ತು ನಾನು
ಬೆಕ್ಕಿಗೆ ಬೆಕ್ಕಿನ ಸ್ವಾಭಿಮಾನ.  ಅಷ್ಟಕ್ಕೂ ನಾನು ಗಳಿಸಿದ್ದೇನು?
ಗೆದ್ದರೆ ಗೆಲ್ಲಬೇಕು ಬಹುಬಲಿಯಂತೆ-
ಬಿಟ್ಟುಕೊಡುವುದರಿಂದ.
ಒಂದು ಬೆಕ್ಕಿನ ಕಣ್ಣುಗಳಲ್ಲಿ ಇಷ್ಟೊಂದು ವಿಷಾದವಿರುತ್ತದೆ
ಎಂದು ನನಗೆ ಗೊತ್ತಿರಲಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಗರ ಕನ್ಯೆ
Next post ನಿರಾಶೆ

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys