ಕಂಡದ್ದು ಕಂಡಹಾಗೆ

ಮನಸ್ಸಿಗೆ ನಾಟುವ ಪ್ರತೀಕಗಳನ್ನು ಬಯಸುವವರಿಗೆ
ಅರ್ಧ ಓದಿ ಬೋರಲು ಹಾಕಿದ ಪುಸ್ತಕ,
ಮೇಜಿನ ಮೇಲೆ ತೆಗೆದಿಟ್ಟ ಟೆಲಿಫೋನು,
ಬಟವಾಡೆಯಾಗದೆ ಬಂದ ಪತ್ರ-ಏನೂ
ಅನಿಸುವುದಿಲ್ಲ.

ಬೃಹತ್ತಾದ ಪ್ರತಿಮೆಗಳನ್ನು ಹುಡುಕಿಕೊಂಡು ಹೋದವರು
ರಸ್ತೆ ಚೌಕಗಳಲ್ಲಿ ಮೇಲೆ ನೋಡುತ್ತ ನಿಂತರು.
ಕೆಲವರು ಏನು ಧ್ಯಾನಿಸುತ್ತಾರೋ ಅದೇ
ಆಗಬಲ್ಲರು.

ಮಹಾದಾರ್ಶನಿಕರು ಮಹಾದರ್ಶನಗಳನ್ನು ಕೊಡುವರು.
ಕೆಲವು ದೃಷ್ಟಿಗೆ ಸಣ್ಣ ವಸ್ತುಗಳು ಬೀಳಲಾರವು.
ಉದಾಹರಣೆಗೆ: ಈ ಹಿಂದೆ ಹೇಳಿದ
ಅರ್ಧ ಓದಿ

ಬೋರಲು ಹಾಕಿದ ಪುಸ್ತಕ ಅಥವ ಹೊತ್ತಲ್ಲದ ಹೊತ್ತು
ಕಾಮಾಕ್ಷಮ್ಮನ ಹಿತ್ತಿಲಲ್ಲಿ ಆರಲು ಹಾಕಿದ ಕಾಚ-
ಸಣ್ಣ ಸಣ್ಣ ಕವಿಗಳು ಸಣ್ಣ ಸಣ್ಣ ಕವಿತೆಗಳನ್ನು
ಬರೆಯುತ್ತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖುಷಿಯಾಗಿ ಕೂರೋಣ ಅಂದ್ಕೊಂಡರೆ
Next post ಧಿಮಾಕು

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys