ದೇವರು

ಆರು ದಿನ ಕೆಲಸ ಮಾಡಿ ಏಳನೆ ದಿನ ದೇವರು
ವಿಶ್ರಾಂತಿ ತೆಗೆದುಕೊಂಡದ್ದು ಎಲ್ಲರಿಗೂ ಗೊತ್ತಿದೆ.
ತಡವಾಗಿ ಎದ್ದ, ದಿನವಿಡೀ ಕುಡಿದ, ಸಾಯಂಕಾಲ
ಬೀಚಿನಲ್ಲಿ ಸೂರ್ಯಸ್ನಾನ ಮಾಡಿದ, ಕ್ಲಬ್ಬಿನಲ್ಲಿ
ಆಡಿದ, ಡಾನ್ಸ್ ಮಾಡಿದ, ಬಾರ್‌ಮೈಡನ್ನು
ಕರೆದುಕೊಂಡು ರೂಮಿಗೆ ಹೊರಟ. ತನ್ನ
ರೂಮೆಂದು ಯಾರದೋ ರೂಮನ್ನು ಹೊಕ್ಕ.

ಎಲ್ಲಿ?  ಕೆಲವರೆನ್ನುತ್ತಾರೆ ಹವಾಯಿಯಲ್ಲಿ
ಎಂದು.  ಇನ್ನು ಕೆಲವರೆನ್ನುತ್ತಾರೆ ಗೋವಾದಲ್ಲಿ
ಎಂದು.  ದೇವರು ಇಲ್ಲಿ ವಿಶ್ರಾಂತಿ ಪಡೆದ
ಎಂಬುದಾಗಿ ಪ್ರತಿಯೊಂದು ವಿಶ್ರಾಮಧಾಮವೂ
ಪ್ರಚಾರ ಮಾಡುತ್ತಿದೆ.  ಹೀಗಿರುವಾಗ
ಪ್ರಿಯೆ, ನಾವು ಯಾರನ್ನು ನಂಬೋಣ?
ಎಲ್ಲಿಗೆ ಹೋಗೋಣ
ಈ ವಾರದ ಕೊನೆಗೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನಗೇನು ಕಡಿಮೆಯಿಲ್ಲ
Next post ದುಃಖ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

cheap jordans|wholesale air max|wholesale jordans|wholesale jewelry|wholesale jerseys