ಹುಡಕುತ ನಾ ಎಲ್ಲಿ ಹೊಗಲಿ?

ಹುಡಕುತ ನಾ ಎಲ್ಲಿ ಹೊಗಲಿ?
ಹುಡುಕಿ ನಾ ಬ್ಯಾಸತ್ತೆ ||ಪ||

ಏಳು ಸಮುದ್ರಗಳು ಏಳು ದಿವಸಗಳು
ಹಾಳು ಬಿದ್ದವು ಕೇಳಿ ಕೇಳಿ ಬ್ಯಾಸತ್ತೆ
ನದಿಗಳೆಲ್ಲಾ ಹುಡುಕಿ ಬ್ಯಾಸತ್ತೆ
ಉದಕ ತುಂಬಿದ ಭಾವಿ ನದರಿಟ್ಟು ನೋಡಿದೆ ||೧||

ಧರಿಯೆಲ್ಲ ತಿರುಗಿದೆ
ಗಿರಿಯೆಲ್ಲಾ ಚರಿಸಿದೆ
ಸರಸಿಜಸಖಿಯೆ
ಪರಮಾತ್ಮ ಸಿಗಲಿಲ್ಲ ||೨||

ಕಡಿಯ ಭಾಗದಿ ನಾನು
ಸುಡುಗಾಡ ಹುಡುಕಿದೆ
ನಡು ಊರೊಳು ಬಂದು
ಮಿಡಕ್ಯಾಡಿ ನೋಡಿದೆ ||೩||

ಸಣ್ಣವಳಿರುತಲಿ
ಬಣ್ಣಿಸಿ ಬಹು ಜನ
ಹಣ್ಣು ಸಕ್ಕರೆ ಕೊಟ್ಟು
ಉಣ್ಣಿಸಿದರು ಎನ್ನ ||೪||

ಶಿಶುನಾಳಧೀಶನ
ಅಸಮ ಜರಿ ರಾಗವನ್ನು
ಶಶಿಮುಖಿ ಕಾಣದೆ
ಕಸಿವಿಸಿಗೊಳ್ಳುವೆ ||೫||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾರಿಜಾಕ್ಷಿ ವನಪಿನೊಯ್ಯಾರೆ
Next post ಗ್ರಹಣ ಹಿಡಿದುದು ಕಾಣದೆ?

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys