ಹಳೆಗನ್ನಡದ ಆಸೆ

ಹಳೆಗನ್ನಡದ ಆಸೆ ಕರೆಯಿತು ನನ್ನ
ಶತಮಾನಗಳ ಕೆಳಗೆ, ಸೆಳೆಯಿತು ನಾನರಿಯದ
ಪರಂಪರೆಗೆ,

ಭಾಷೆಗೆ, ಭಾಷೆ ಹತ್ತಿರವಾಯಿತು ಎನಿಸಿದ ಬಗೆಗೆ.
ಉದಾಹರಣೆಗೆ: ಆ ಸೂತ ಆ ರಾಣಿಯ ಹಾರ
ಕಿತ್ತುಕೊಂಡ ರೀತಿಯಷ್ಟೆ ಅಲ್ಲ, ಅದರ
ಹರಳುಗಳು ನೆಲದಲ್ಲಿ ಚೆಲ್ಲಿದ ರೀತಿ.  ನೀರೊಳಗೊಬ್ಬ
ಬೆವರಿದ್ದಕ್ಕಲ್ಲ, ಬೆವರನ್ನು ಕಾವ್ಯ ಮರೆಯದ್ದಕ್ಕೆ,
ಕಟ್ಟಿದರಿವರು, ಮುಟ್ಟಿದರು, ಹಿಡಿದೊತ್ತಿ ಮೆಟ್ಟಿದ-
ರೆಂಬ ಅಗ್ಗಳಕ್ಕಲ್ಲ.  ಅಷ್ಟಕ್ಕೆ ಅಷ್ಟು ಉತ್ಸಾಹ-
ಗೊಂಡರೆಂದು.

ಪಂಪನಿಗೊಂದು ಬನವಾಸಿ ದೇಶ.  ನನಗೂ ಒಂದು ಹುಟ್ಟೂರು.
ಸಮಾನಾಂತರಗಳನ್ನು ಕಂಡುಕೊಳ್ಳುವ ತವಕ
ಚರಿತ್ರೆಯ ಕಡೆಗೆ ನಾನು, ನನ್ನ ಕಡೆಗೆ ಚರಿತ್ರೆ
ಕೈಚಾಚುವುದರಲ್ಲಿ.  ಮತ್ತೆ ಕಟ್ಟಿದ ಮಾಲೆಗಳು
ಮುಡಿವವರಿಗಾಗಿ, ಮುದ್ರಿಸಿದ ಪುಸ್ತಕಗಳು ಓದುಗರಿಗಾಗಿ
ಹುಡುಕುತ್ತಿರುವುದೇನೂ ಇಂದಿನದಲ್ಲ.

ಹೀಗೆ ಹುಡುಕುವುದು ಮನಸ್ಸಾಕ್ಷಿ
ಚರಿಪಾರಣ್ಯದ ಪಕ್ಷಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಿ.ಡಿ.ಎ ಬುಲ್ಡೋಜರ್‍
Next post ಮದುವೆ ಬಸ್ಸು; ಕಾಫಿ ಹುಡುಗ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys