ಮಳಿ ಬಂತೇ ರಮಣಿ

ಮಳಿ ಬಂತೇ ರಮಣಿ ಮಾಯದ್ದೊಂದು ||ಪ||

ಮಳಿ ಬಂತೇ ರಮಣಿ
ಬೆಳಗು ಮೀರಿತೆ ನಳಿನಲೋಚನೆ
ಮಳಿ ಬಂದಿತು ಛಳಿ ಬಿದ್ದಿತು
ಕಳೆದೋರಿತು ಇಳಿಸ್ಥಳದೊಳು
ಜಲಜಮುಖಿ ಪ್ರಳಯ ಸೂಚನೆ ಇದು ||೧||

ನಾವು ಬರುವ ಹಾದಿ ತಪ್ಪಿ ಸುವಿಚಾರದೋರದೆ
ತೊಯ್ಯದ ಗೊನಿ ತಪ್ಪಲಮನಿ
ಮಾಯದ ಧ್ವನಿ ನ್ಯಾಯದ ಹನಿ
ಆಯಾಸವ ಪಡುತಿಹ ಪರಿ
ಸುಯೋಗವ ನೋಡದೆ ಬಲು ||೨||

ಶಿಶುನಾಳಧೀಶನ ದಯದಿ ಕರಸಿಕೊಂಡಿತೇ
ಭಸಿತ ಋಣವು ನಿಶಿಕಿರಣವು
ದೆಸೆಗೆಡದಾತ್ಮಾನಂದದಿ
ವಿಷಯ ಸಂಭೋಗ ಫಲದಿ
ಹುಸಿಗಾಣದೆ ತುಸು ತುಸು ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗ್ರಹಣ ಹಿಡಿದುದು ಕಾಣದೆ?
Next post ಆಶಾಢ ನಿಬ್ಬಣ ಸೂಶ್ಯಾಡಿ ಬಂತು

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys