ಮಾನಿನಿ ಮಾತಾಡಬ್ಯಾಡಮ್ಮಾ

ಮಾನಿನಿ ಮಾತಾಡಬ್ಯಾಡಮ್ಮಾ
ನೀ ಸುಮ್ಮನಿರು ಜಾಣ ಹೆಂಗಸರಾಟ ನೋಡಮ್ಮಾ || ಪ ||

ಕ್ಷೋಣಿಯೊಳಗತಿಗೇರಿ ಭಕ್ತರು ಪ್ರಾಣ ಮೂವರಿಗೊಬ್ಬ ಗುರು
ಕಲ್ಯಾಣದಯ್ಯನ ಮಾಡಿಸಿದ ಪೌರಾಣದೊಳು
ಪ್ರತಿ ಕಲಹವಾಯಿತು || ಅ. ಪ. ||

ಹರ ಶರಣ ಲೀಲಾಮೃತ ಕಥೆಯ ತೆರುದ್ಹೇಳುತಿರದರಿತು
ತಾ ಬ್ಯಾರೊಂದು ಸಂಗತಿಯ
ಕರಸಿದರು ಲಕ್ಷ್ಮೇಶ್ವರದ ಪೌರಾಣಿಕ ನರಮತಿಯ
ಮೆರೆವ ಬಸವೇಶ್ವರ ಲೀಲಾಮೃತ ಶರಧಿಯೋಳ್ ವಿಷಮಾತ್ರ
ಬೆರಸಿದ
ಮರುಳತನದ ಈ ಊರ ಗೌಡರಿಗೆ ಹಲವರು
ಅರಿಕೆಯಿಲ್ಲದಾಯಿತು || ೧ ||

ಓದುವರಕ್ಷರವ ಇದರೊಳಗೆ
ವೇದಾಂತಮಾರ್ಗದ ಹಾದಿ ತಿಳಿಯದು ಶಾಸ್ತ್ರಿಯೆಂಬುವಗೆ
ಸಾಧಿಸಿತು ಇನ್ನು ಕ್ರೋಧ ಅಂದಾನಯ್ಯ ಗದಿಗೆಯ್ಯಗೆ
ಹಾದಿ ತಿಳಿಯದೆ ಹೀಂಗ ಜಂಗಮರವರು ಬೈದಾಡುತಿರೆ
ಬಸವಾದಿ ಪ್ರಮಥರು ಮೆಚ್ಚಲರಿಯರು ಮೇದಿನಿಗೆ
ಮಹಾ ಚೋದ್ಯವಾಯಿತು || ೨ ||

ಏನನಲಿ ಈ ಗ್ರಾಮದ ಜನರು ಸನ್ಮಾನನರಿಯದ ಕಾನನದ
ಕಪಿ ಹಿಂಡಿನಂತಿಹರು
ಗಾನರಸದ ಮೇಳಕೆ ತಾವು ತಮ್ಮೊಳು ಕುಳಿತು ಕೇಳುವರು
ತಾನು ಶಿಶನಾಳೀಶ ಬಸವನ ಶೂನ್ಯ ಸಿಂಹಾಸನದ ವಿಸ್ತರ
ಹೀನ ಪಾಪಿ ಭವಿಗಳೊಡನೆ ಜ್ಞಾನಿಯಾದರೆ ನೀನು ಉಸುರದಿರು || ೩ ||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವರಿಗೆ ಬಿಟ್ಟಿದ್ದು
Next post ಹಬ್ಬಿದ ಬಳ್ಳಿ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

cheap jordans|wholesale air max|wholesale jordans|wholesale jewelry|wholesale jerseys