ನಾವು

ಯಾರಿಗಾದರೂ ಏನಾದರೂ ಆಗಬಹುದು
ಮುಂದಿನ ಕ್ಷಣಗಳಲಿ
ಸಾಯಬಹುದು ಸ್ವಲ್ಪದರಲ್ಲಿಯೇ
ಮರುಹುಟ್ಟು ಪಡೆಯಲೂಬಹುದು.
ಗಳಿಸಬಹುದು ಕಳೆದುಕೊಳ್ಳಲೂಬಹುದು
ಹೀಗೇಽ ಇನ್ನೂ ಏನೇನೋ……

ಆದರೂ ಒಳತೋಟಿಗೆ ಕನಸುಗಳೇನೂ ಕಡಿಮೆ ಇಲ್ಲ
ಸದ್ದು ಗದ್ದಲಲ್ಲೇ ಹೆಣೆದುಬಿಡುವ
ಸೌಧಕ್ಕೂ ಗೆದ್ದಲಿರುವೆಗಳ ಕಾಟ
ಅಸ್ಪಸ್ಟ ಮುಖವಾಡಗಳು ಮನೆಮನೆಗಳೊಳಗೆ
ಬೆವರ ಹನಿ ಉದುರಿಸುವ
ಕಟ್ಟಡ ಕೆಲಸಗಾರರ ಸ್ಪಷ್ಟಮಾತು.

ಕಾಲಯಾತ್ರೆಯ ಪ್ರವಾಸಿಗಳು
ಬದುಕಿಗೆ ಅರ್ಥಕೊಡದೆ ಅರಿಯದೇ
ಭಾವನೆಗಳಿಗೆ ಬೆನ್ನುಹತ್ತಿದವರು
ಗೊತ್ತಿದ್ದೂ ಗೊತ್ತಿದ್ದೂ
ವಿಚಿತ್ರ ಕೂಪಗಳಿಗೆ ಬೀಳುವ
ಸ್ವಾರ್ಥ ಮೋಹಮದಮತ್ಸರ
ತುಂಬಿಕೊಂಡಿರುವ ಟೊಳ್ಳು ಜೀವಿಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಾಂಧಿಗೆ
Next post ಉತ್ಸವ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

cheap jordans|wholesale air max|wholesale jordans|wholesale jewelry|wholesale jerseys