ನರ್ತಕಿ ಬಂದಳು

ನರ್ತಕಿ ಬಂದಳು ಛಲ್‌ಝಲ್ ನಾದದಿ
ಠಮ ಢಮ ತಾಳಕೆ ಕುಣಿಯುತ್ತ
ಪಾತರಗಿತ್ತಿಯ ಆ ಕುಣಿತ.
ಪಾರ್ಥ ಸುಭದ್ರೆಯ ರಾಧಾಕೃಷ್ಣರ-
ನೊಬ್ಬಳೆ ತಾನೆಂದೆಣಿಸುತ್ತ
ರಂಗಸ್ಥಳದಲಿ ತಿರುಗುತ್ತ.

ತುಟಿಯಿಂದುರುಳುವ ಹಾಡಿನ ತನಿರಸ
ಮೌಕ್ತಿಕ ಮಣಿಯಂತುರುಳುವುದು;
ತಾಳದ ಓಜೆಗೆ ಜಾರುವುದು!
ಕತ್ತಲೆ ನಡುವಣ ಚಂದ್ರನ ಬಿಂಬವೊ
ಕೆದರಿತ ಹೆರಳದು ಇಕ್ಕೆಡೆಯು
ಸುಂದರ ಮುಖವೊ ಮಿನುಗೆಲೆಯು.

ಕಣ್ಣಾಲಿಗಳನು ಹೊರಳಿಸಿ ಉರುಳಿಸಿ
ದುಂಡನೆ ರುಂಡವನಲುಗಾಡಿ;
ಕಣ್ಣನು ಮೂಗಿನ ಮೇಲಿರಿಸಿ
ಕುಣುಕುಣು ಮೊಣಕಾಲಾಟದಿ ನೋಟದಿ
ಕೊಂಕಿಸಿ ನಡುವನು ಆ ಮಳ್ಳಿ
ಚಂಚಲ ಮಿಂಚಿನ ಬಾನ್‌ಬಳ್ಳಿ!

ಫಾರಸಿ ಹಿಂದೀ ವಂಗೀಯ ಕಲೆ
ಒಂದಾಯಿತು ಇಂದೀ ಮೇಳ!
ಬೃಂದಾವನದ ಆ ಲೀಲಾ!
ಬಂದಳು ನರ್ತಕಿ ಕೈಗಳ ಬೀಸುತ
ಕೆಳಮೇಲಾಂಗಗಳಾಡಿಸುತ
ಮೆಟ್ಟುತ ಬೆಟ್ಟಲಿ ಆ ಕುಣಿತ.

ಓಹೋ ಓಹೋ ಕನ್ನಡ ಗಾನ
‘ಕಥಕಳಿ’ಯಾಟದ ಬಯಲಾಟ
ಭರತನ ನಾಟ್ಯದ ಮನನೋಟ.
ಲಾಸ್ಯಾನರ್ತನ ನಟಕೇಸರಿ ಮನ
ಜುಂ ಝುಂ ಛಲ್ ಛಲ್ ಈ ಓಜ,
ನರ್ತನ ತೋರಿದ ನಟರಾಜ.

ಹೊರಳುವ ಅಂಗಗಳಾಟವ ನೋಡಿರೊ
ಬೆರಳನು ತೋರವ ತಿರುಳನ್ನು
ಕೊಂಕಿಸಿ ಕಾಲಿನ ನಿಲುವನ್ನು!
ದುಂಡನೆ ತಲೆಯನಲುಗಿಸಿ ತೋರುವ
ಮನ್ಮಥ ಕರೆಯೊ ಅದು ಕೇಳೊ!
ಚಕ ಚಕ ಎದೆಯ ಗೆಲುನೋಡೊ.

ಬಗ್ಗಿದಳೆದ್ದಳು ಹಾರಿದಳೋಡಿದ-
ಳೆಂತೀ ಆಟದ ಈ ಬಲ್ಮೆ
ಕುಲುಕಿತ ಅಂಗಗಳೀ ನಲ್ಮೆ.
ಊರ್ವಶಿ ರಂಭೆಯರಾದಿನದಾಟವ
ತೋರುತ ನರ್ತಕಿ ಬಂದಳದೊ,
ಕುಡಿನೋಟಾಡಿಸಿ ಕುಣಿವಳದೊ!

ಗಿರಿಗಿಟ ತಿರುಗಿದ ತೆರದಲಿ ತಿರುಗಿತು,
ಧಕಥಕ ಧೀಂಕಿಟ ಹಾರಿದಳು
ಗಾಳಿಯ ನರ್ತನ ತೋರಿದಳು.
ವಾನರ ಚೇಷ್ಟಾ ಗೋಷ್ಠಿಯಲಿರಿತಳು
ಹಿಂದೂ ಮುಂದೂ ಜೋಲಾಡಿ
ತನಗೇ ತಾನೇ ತೂಗಾಡಿ.

ಸೂರ್ಯನ ಕಾಂತಿಯ ನೋಡುತ ಭ್ರಾಂತಿಯಿಂ
ಥೈ ಥೈ ಹಾರಿತು-ಆ ರಭಸ
ಲೇ ಲೇ ತಟ್ಟುವ ಪದನ್ಯಾಸ!
ಢಮರುಗ ಭಾರಿಸಿ ಲೋಕವ ತಿರುಗಿಸಿ
ನರ್ತನ ತೋರಿದ ಪರಮೇಶ;
ಬಂದಳು ನರ್ತಕಿ-ಆ ವೇಷ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೯
Next post ತೇರು ಬಂತು, ದಾರಿ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys