ಕಂಡೆನೊ ನಾ!

ಕಂಡೆನೊ ನಾ! ಬೇವಿನ ಜೀವದ ಈ-ಬಾ-ಳು!!

ಈ ಲೋಕ ಈ ರಾಜ್ಯ ಈ ಊರು ಈ ಮನೆ
ಕಾಲಾನುಕ್ರಮದಲ್ಲಿ ಜನರಾಶಿ ಒಂದಾಗಿ,
ಬಲ್ಲಿದ ಬಡವನ ಶತಕೋಟಿ ಸಂಸಾರ-  ||ಕಂ||

ಸಾಗರ-ಭೂಮಿಯ ನಡೆ ಕಂಡು ಮೊರೆವುದೊ,
ಯೋಗ ತಾರಕೆಗಳು ಮಿಣುಮಿಣುಕಿ ನಗುವುದೊ;
ಆಗದೀ ಜನಭಾರ ಕಲ್ಭೂಮಿ ಆಳುವುದೊ-  ||ಕಂ||

ತತ್ವಗಳೊಂದೆಡೆಽ ಉದ್ಧಾರ ಕಾಯ್ವುವು,
ನೀತಿಗಳ್ ಬಿರುಗಾಳಿ ಅಲೆಯೊಳು ಸಾಗ್ವುವು;
ಮಾತು ಮಾತಿನ ಜೀವ, ತೋರಲಿದರೆ ಜೀವ-  ||ಕಂ||

ಅವಸರದ ಆಲಾಪ, ದಣೀದ ದೇಹಿಯ ತಾಪ,
ಭುವನತ್ರಯದ ಪಾಪ, ಸಮ್ಮಿಳಿತ ಮಾಕೂಪ,
ಭವ ಸರಸಿಜನದು ಸರಸತಿಯರ ಶಾಪ-  ||ಕಂ||

ಮನುಜನ ಮನಶ್ಶಕ್ತಿ ಮರುಳಾಗಿ ಕಲ್ಲಂತೆ,
ತನುಮನವೆಲ್ಲವು ಸ್ವಾರ್ಥಕ್ಕೆ ಮರೆಹೋಗಿ
ಜನಗಣವು ಪಶುಗಣವಾದ ವೈಚಿತ್ರ್‍ಯವೊ-  ||ಕಂ||

ರಂಗುರಂಗಿನ ತಳಕು, ಬಣ್ಣ ಬಣ್ಣದ ಬೆಳಕು;
ಶೃಂಗಾರ ಸಂಪತ್ತು ನಗುಸರಸ ಸವಿಮಾತು;
ಭೃಂಗಕುಂತಲ ‘ಷೋಕು’, ಕೃತಕ ಜೀವದ ಮಂಕು-  ||ಕಂ||

ಜನ ಜನಿತ ಜನಮೋಹ, ಜೀತ ಜೀತದ ಜೀವ,
ಗಣನೀಯ ಗಂಭೀರ, ಚಂಚಲ ವ್ಯವಹಾರ,
ದಣಿದ ಬಾಳಿನ ಸಾರ ಸಾಕು ಸಾಕು ಸಾಕೀ ಹಾರ!  ||ಕಂ||

ಒಂದಿಽನ ನಾನೊಂದು ಪೂಗಿಡವ ನಟ್ಟೆನೊ,
ಮುಂದಾರು ದಿನ ಕಳೆದು ನಾನೋಡಿ ಅತ್ತೆನೊ;
ಅಂದಿಽತು ನನಗಽದು ‘ಚಿಗುರೆಽಲೆ ಕೊಡೆ’ನೆಂದು-  ||ಕಂ||

ಹಸುರಾಂತ ವನಶೋಭೆ ನೀಲಾಕಾಶದ ಪ್ರಭೆ,
ಹಸುಗೂಸು ಹುಸಿ ಸೊಬಗು ಪಂಚಭೂತದ ಬೆಡಗು,
ನಸುನಗುತ ಒಲಿದಽರು ವಿರಸ ಪ್ರಕೃತಿಯದೊ-  ||ಕಂ||

ಜನಕೋಟಿ ಈ ಜಗದಿ ಸಂಸಾರವೆಂದೆಂದು
ಮುನಿಜನವು ಕವಿಗಣವು ಹಾಡಿ ಪಾಡಿದರಂದು,
ಋಣಮುಕ್ತ ಜೀವಽದ ಪಾಡನ್ನು ಹಾಡುತ್ತ;  ||ಕಂ||

ಲೋಕವು ದಿನಕೊಂದು ರೂಪವ ಪಡೆವುದೊ,
ಸಾಕಿಽದ ಕೋಳಿಯ ಬೆಳೆಸಂತೆ ಬದಲಾಗೆ;
ಈ ಕರ್ಮ ಜಾಲಕ್ಕೆ ಪ್ರಾಣಗಳರ್ಪಿಸಿ-  ||ಕಂ||

ಸಲ್ಲಲಿತ ಸುಖಶಾಂತಿ-ರಣರಂಗ ಭಯಕ್ರಾಂತಿ;
ಮಲ್ಲಳಿಯ ಇನಿವಾಡು-ಸಂಸಾರ ಒಳಪಾಡು,
ಬಲ್ಲವರ ವಿದ್ವತ್ತು-ಲೋಕನಾಶಕೆ ಹೇತು!  ||ಕಂ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೦
Next post ಜಯದ್ರಥನ ಕೊಲೆ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

cheap jordans|wholesale air max|wholesale jordans|wholesale jewelry|wholesale jerseys