ಬೆಳೆಗಿನ ತೋಟದಲ್ಲಿ

ಬಳ್ಳಿಯ ಬೆರಳಲಿ ಹೂವೊಂದಿತ್ತು
ಉಂಗುರವಿಟ್ಟಂತೆ.
ಹೂವಿನ ತುಟಿಯಲಿ ಹನಿಯೊಂದಿತ್ತು
ಮುತ್ತೊಂದಿಟ್ಟಂತೆ.

ನೀರಿನ ಹನಿಯೇ ಕಾಮನಬಿಲ್ಲಿನ
ಕಂಬನಿಯಾಗಿತ್ತು.
ಹೂವಿನ ಸುತ್ತಾ ಹರಡಿದ ಹುಲ್ಲಿನ
ಹಸುರಿನ ಹಾಸಿತ್ತು.

ಹನಿಗಳ ಹಿಡಿಯುತ ಕುಡಿಯುತ ಕೋಗಿಲೆ
ಬಾಯನು ತೆರೆದಿತ್ತು.
ಬಳ್ಳಿಯ ಹೂವಿನ ಬೆಳ್ಳಿಯ ಬಾಗಿಲೆ
ಹಾಡಿಗೆ ತೆರೆದಿತ್ತು.
ಭೂಮಿಯ ಉದಯದ ಭವ್ಯಾನಂದದ
ಮಣ್ಣಿನ ಹೊಸ ಗಾಳಿ
ಮೊದಲಿನ ಮಕ್ಕಳ ತೊದಲಿನ ಕೇಕೆಯ
ಉಂಗುರ ದನಿಗಳಲಿ

ಕರೆದಿದೆ: ‘ನೋವೇ ಇಲ್ಲದ ಊರಿಗೆ
ಎಲ್ಲಾ ಬರಬಹುದು.’
ಕನಸಿನ ಹಸುವಿನ ಹಾಲೂ ಮಧುರವೆ?
-ಹಾಗೂ ಇರಬಹುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಮತಾವಾದ
Next post ಯಾರು ನನ್ನ ಚಿನ್ನ ರನ್ನ?

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys