ಕಾಳಿನ ಮೇಲೆ ಹೆಸರು

ಕಾಳಿನ ಮೇಲೆ ಹೆಸರು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು’” ಎಂದು ಸಾಹುಕಾರನು ನುಡಿದನು.

“ತಿನ್ನಲು -ನಾಲ್ಕು ಕಾಯಿಗಳನ್ನಾದರೂ ಕೊಡಿರಿ” ಎಂದನು ಸಾಧು.

“ಅವು ಪುಕ್ಕಟೆ ಬಂದಿಲ್ಲ. ನಮಗೆ ಸಾಕಾಗಿ ಉಳಿದರೆ, ನಿನ್ನನ್ನು ಕರೆದು ಕೊಡುವೆನು. ಆಯಿತೇ ?” ಎಂದು ಸಾಹುಕಾರನು ಹೀಯಾಳಿಸಿದನು.

“ಎಲ್ಲವನ್ನೂ ನಾನೇ ತಿನ್ನುವೆನೆಂದರೆ ಸಾಧ್ಯವೇ ? ಪ್ರತಿಯೊಂದು ಕಾಳಿನ ಮೇಲೆ ಅದು ಹುಟ್ಟುವಾಗಲೇ ಅದನ್ನು ಯಾರು ತಿನ್ನಬೇಕಾಗಿದೆಯೋ ಅವರ ಹೆಸರು ಬರೆದಿರುತ್ತದೆ.”

ಸಾಹುಕಾರನ ತಲೆ ತಿರುಗಿತು – ಸಾಧುವಿನ ಬ್ರಹ್ಮಜ್ಞಾನವನ್ನು ಕೇಳಿ. ಕೇಳಿದನು – “ನೀನೊಬ್ಬ ಒಂಟೆಯ ಮೇಲಿನ ಜಾಣನೇ ಬಂದಿರುವೆಯಲ್ಲ ! ಇಲ್ಲಿ ನೋಡು ನನ್ನ ಕೈ ಬೆರಳಿನಲ್ಲಿ ಹಿಡಿದ ಕಾಳು ! ಇದರ ಮೇಲೆ ಯಾರ ಹೆಸರು ಬರೆದಿದೆ ಹೇಳು ನೋಡುವಾ.”

“ಅದರ ಮೇಲೆ ಒಂದು ಕಾಗೆಯ ಹೆಸರಿದೆ. ಆ ಕಾಳು ಅದರ ಆಹಾರ” ಎಂದನು ಸಾಧು.

ಸಾಹುಕಾರನು ಈರ್ಷೆಯಿಂದ – “ಇದೋ ನಾನಿದನ್ನು ತಿಂದುಬಿಡುವೆ. ಎಲ್ಲಿದೆ ನಿನ್ನ ಆ ಕಾಗೆ ?” ಎನ್ನುತ್ತ ಆ ಕಾಳನ್ನು ಬಾಯಲ್ಲಿ ಒಗೆದುಕೊಳ್ಳಹೋದನು. ಅದು ತಪ್ಪಿ ಅವನ ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿತು.

ನೆಲಗಡಲೆಯಕಾಳು ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿದ್ದರಿಂದ ಸಾಹುಕಾರನ ಉಸಿರಾಟಕ್ಕೆ ತಡೆಯಾಯಿತು. ಕೂಗಾಡತೊಡಗಿದನು. ಆ ಗಲವಿಲಿಗೆ ನೆರೆಹೊರೆಯವರು ನೆರೆದರು. ಆತನನ್ನು ಹೊತ್ತುಕೊಂಡು ಕ್ಷೌರಿಕನ ಮನೆಗೆ ಹೋದರು.

ತನ್ನಲ್ಲಿರುವ ಚಿಮಟಿಗೆಯಿಂದ ಹಡಪಿಗನು, ಸಾಹುಕಾರನ ಮೂಗಿನೊಳಗಿನ ಆ ಕಾಳನ್ನು ತೆಗೆದು ಬೀಸಿ ಅಂಗಳಕ್ಕೆ ಒಗೆದನು. ಕೂಡಲೇ ಬದಿಯ ಗಿಡದಲ್ಲಿ ಕುಳಿತ ಕಾಗೆ ಹಾರಿಬಂದು ಆ ಕಾಳನ್ನು ಕಟ್ಟಿಕೊಂಡು ಹೋಯಿತು.

“ಕಾಗೆಗೆಂದು ಹುಟ್ಟಿದ ಕಾಳು ಕಾಗೆಗೆ ಸಂದಿತು” ಎಂದನು ಆ ಸಾಧು. ಆ ಬಳಿಕ ಸಾಧುವನ್ನು ಕರೆದು ಸಾಹುಕಾರನು ಸತ್ಕರಿಸಿ ಕಳಿಸಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನೇ ಅಪ್ಪ ಆಗ್ತೀನಿ
Next post ಚಂದ್ರನ ಗೋಳು

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys