‘ಮಾಸ್ತಿಯವರಾಸ್ತಿ ಆ ಸಣ್ಣ ಕತೆಗಳೆ’ ಎಂದು
ಸಾಂಬಶಾಸ್ತ್ರಿಗಳ ಸಿದ್ಧಾಂತ. ಕೇಶವಮೂರ್ತಿ
‘ಶ್ರೀನಿವಾಸರ ಕವಿತೆ ಒಣ ಗದ್ಯವೇ ’ ಎಂದು
ಎಗರಿ ಬೀಳುವನು. ಈ ಸಂಶಯವೆ ಕವಿಕೀರ್ತಿ.
ಪರಿಚಿತ ಕವಿಗಳೆಲ್ಲ ಬರಿದೆ ರಾರಾಜಿಪರು
ಪ್ರಾಚೀನ ಪ್ರಾರಬ್ಧ ಹೊತ್ತು. ಅದ ಹೊಗಳುವರು
ಶ್ರೀನಿವಾಸರ ಕೃತಿಯನೇನೆಂದು ಮೆಚ್ಚುವರು?
ಗಡವಿಲ್ಲ, ದಲ್ಲಿಲ್ಲ, ಮೇಣ್-ಬತ್ತಿ ಹೊಗೆಯಿಲ್ಲ;
ಅಪ್ರಕೃತ ಸಂಸ್ಕೃತದವಾಂತರದ ಧಗೆಯಿಲ್ಲ.-
ಇಲ್ಲಿ ಜೀವನದಂತೆ ಕವಿತೆ: ಜೀವದ ಉಸಿರು
ಮಳೆಬಿದ್ದ ಸಂಜೆ ಬೀದಿಯಲಿ ಸಾವಿರ ಬೆಳಕು,
ಹಸುರು ನಗೆ, ಕೆಂಪು ಗಾಯಗಳು. ಬಂಡೆಯನುತ್ತು
ಬೆಳೆದ ಮೂಗಿಂಗೆ ಈ ಸಹಜ ಕವಿತೆಯ ಮುತ್ತು
ಗ್ರಾಹ್ಯವಾದೀತೆ? ಇದಕಿಲ್ಲ ಕವಿತೆಯ ಹೆಸರು!
*****
Related Post
ಸಣ್ಣ ಕತೆ
-
ಏಕಾಂತದ ಆಲಾಪ
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
-
ಆ ರಾಮ!
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…