ಗೀಜಗನ ಗೂಡೊಳಗೆ

ಗೀಜಗನ ಗೂಡೊಳಗೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಮನೆಯ ಪಕ್ಕದ ಮುಳ್ಳು ಕಂಠಿಗಿಡದ ಎತ್ತರದ ಕೊಂಬೆಯಲ್ಲಿ ಗೀಜಗವೊಂದು ಗೂಡು ಕಟ್ಟಲಾರಂಭಿಸಿದೆ. ಮೊದಲಿಗೆ ಎಲ್ಲಿಂದಲೋ ಒಂದಿಷ್ಟು ಹುಲ್ಲು, ನಾರು ತಂದು ಹಾಕಿಕೊಳ್ಳುತ್ತದೆ. ನಿಧಾನಕ್ಕೆ ಗೂಡು ನಿರ್ಮಾಣಗೊಳ್ಳಲಾರಂಭಿಸುತ್ತದೆ.

ಗೀಜಗಕ್ಕೆ “ಇಂಜಿನೀಯರ್ ಹಕ್ಕಿ” ಎಂದೂ ಹೆಸರಿದೆಯಂತೆ. ನಿಜಕ್ಕೂ ಒಂದೊಂದು ಹುಲ್ಲು ಎಳಸನ್ನೂ ಸೂಕ್ಷ್ಮವಾಗಿ ಹೆಣೆಯುವ ಅದರ ಕಲೆಗಾರಿಕೆಗೆ ಗೀಜಗವೇ ಸಾಟಿ. ಚಾಪೆ ಹೆಣೆದಂತೆ ಒತ್ತೊತ್ತಾಗಿ ಪದರಗಳಮ್ನ ಹೆಣೆದು ಗೋಡೆಗಳನ್ನು ಸೃಷ್ಟಿಸಿ ಗಿಡಕ್ಕೆ ತೂಗುಬಿದ್ದಂತೆ ಗೂಡು ತಯಾರಾಗುತ್ತದೆ. ಗೂಡಿನ ಕೆಳಭಾಗದಲ್ಲಿ ಒಳಹೋಗಲೆಂದು ಪುಟ್ಟ ಪ್ರವೇಶದ್ವಾರ. ಉದ್ದಕ್ಕೆ ಕೊಳವೆಯಾಕಾರಕ್ಕೆ ಮೂಡಿದ ಆ ಪ್ರವೇಶದ್ವಾರದಿಂದ ಗೂಡಿನೊಳಗೆ ಒಂದೂ ಗುಟ್ಟು ಹೊರಬರುವಂತಿಲ್ಲ! ಗೂಡು ಕಟ್ಟಿದ ಮಾರನೇ ದಿನವೆಲ್ಲಾ ಗೀಜಗ ತನ್ನ ಕೊಕ್ಕಿನಿಂದ ಎಲ್ಲಿಂದಲೋ ಹಸಿಮಣ್ಣು ತಂದು ಗೂಡಿನೊಳಗೆ ಹೋಗುತ್ತಿತ್ತು. ಮಣ್ಣು ಏಕಿರಬಹುದು? ಎಷ್ಟು ಯೋಚಿಸಿದರೂ ಹೊಳೆಯಲಿಲ್ಲ. ಮುಸ್ಸಂಜೆ ಹೊತ್ತಿನಲ್ಲಿ ಒಂದೆರಡು ಮಿಂಚು ಹುಳುಗಳನ್ನು ಕೊಕ್ಕಿನಲ್ಲಿ ಕಚ್ಚಿಕೊಂಡು ಗೀಜಗ ಗೂಡು ಹೊಕ್ಕಿದ್ದು ಕಂಡಿತು. ಇದೂ ಯಾತಕ್ಕೆಂದು ತಿಳಿಯಲಿಲ್ಲ. ಅದರ ಆಹಾರವಿರಬಹುದೇನೋ ಎಂದುಕೊಂಡರೂ, ಅದರ ಆಹಾರವಾಗಿದ್ದರೆ ಸಿಕ್ಕಲ್ಲೇ ತಿಂದು
ಮುಗಿಸಿಬಿಡುತ್ತಿತ್ತು. ಮಾನವರಂತೆ ಮನೆಗೆ ತಂದು ಪರಿಷ್ಕರಿಸಿ ತಿನ್ನಬೇಕೆಂದೇನಿಲ್ಲವಲ್ಲಾ ಎಂದೂ ಅನ್ನಿಸಿತು.

ಮಾರನೆಯ ದಿನ ಬೆಳಗಾಗುವುದರಲ್ಲಿ ಒಂದಿದ್ದ ಗೀಜಗ ಎರಡಾಗಿವೆ. ಇನ್ನೊಂದು ಗೀಜಗ ಹೆಣ್ಣಿರಬಹುದೆಂದು ಊಹಿಸಿದೆ. ಸ್ವಲ್ಪದಿನಗಳವರೆಗೂ ಹೆಣ್ಣು ಗೀಜಗ ಗೂಡಿನಿಂದ ಹೊರಗೇ ಬರಲಿಲ್ಲ. ಗಂಡು ಗೀಜಗವೇ ಹೆಣ್ಣಿಗೂ ಆಹಾರ ತಂದುಕೊಡುತ್ತಿತ್ತೇನೋ?  ಬಹುಶಃ ಹೆಣ್ಣು ಗೀಜಗ ಮೊಟ್ಟೆ ಇಟ್ಟಿರಬಹುದೇ? ಊಹೆ ನಿಜವಾಗಿತ್ತು. ಒಂದು ಬೆಳಗ್ಗೆ ಗೂಡಿನಿಂದ ಮರಿ ಗೀಜಗಗಳ ಕಿಚಿಪಿಚಿ ಕೇಳಲಾರಂಭಿಸಿತ್ತು. ಗಂಡು ಹೆಣ್ಣು ಗೀಜಗಗಳೆರಡು ಎಲ್ಲಿಗೆಲ್ಲಿಗೋ ಹಾರಿ ಹೋಗಿ ಆಹಾರ ತಂದು ಮರಿ ಗೀಜಗಗಳಿಗೆ ತುತ್ತುಣಿಸುವ ದೃಶ್ಯ ಮನೋಹರವಾಗಿತ್ತು. ತಿಂದಷ್ಟು ಆಹಾರಕ್ಕಾಗಿ ಅರಚುವ ಅವುಗಳ ಹೊಟ್ಟೆ ಬಾಕತನ ಆಶ್ಚರ್ಯ ತರಿಸುತ್ತಿತ್ತು.

ಕೆಲ ದಿನಗಳ ನಂತರ, ಸಂಸಾರ ಸಮೇತ ಗೀಜಗ ಅದೆಲ್ಲಿಗೆ ಹಾರಿ ಹೋಯ್ತೋ! ಮತ್ತೆ ಹಿಂದಿರುಗಬಹುದೆಂದು ಕೆಲ ದಿನ ಕಾಯ್ದು ಕೊನೆಗೊಮ್ಮೆ ಗೀಜಗನ ಗೂಡಿನ ಒಳಗನ್ನು ನೋಡುವ ಕುತೂಹಲದಿಂದ ಗೂಡು ಕಿತ್ತು ತಂದು ಒಳಗೆಲ್ಲಾ ಪರೀಕ್ಷಿಸಿದರೆ ಗೂಡಿನ ಒಳಭಾಗದಲ್ಲಿ ಮೆತ್ತಿದ್ದ ಹಸಿಮಣ್ಣು ಒಣಗಿ ನಿಂತಿದೆ. ಜೊತೆಗೆ ಆ ಮಣ್ಣಿನ ಮೇಲೆ ಮೆತ್ತಿಕೊಂಡು ಸತ್ತ ಮಿಂಚಿನ ಹುಳುಗಳು! ಅಬ್ಬಾ ಗೀಜಗನ ಜಾಣ್ಮೆಯೇ! ತನ್ನ ಮನೆಗೆ ಬೆಳಕು ಮಾಡಿಕೊಳ್ಳಲು ದಿನವೂ ಒಂದೊಂದು ಜೀವಂತ ಮಿಂಚು ಹುಳ ತಂದು ಅಂಟಿಸಿ ಅದು ಸತ್ತರೆ ಇನ್ನೊಂದು ಅಂಟಿಸಿಕೊಳ್ಳುವ ಈ ಜಾಣ್ಮೆ ಗೀಜಗಕ್ಕೆ ಯಾರು ಕಲಿಸಿದರು? ಅಪಾರ ಜೀವರಾಶಿಯ ಆಗರವಾಗಿರುವ ಈ ಸೃಷ್ಟಿಯಲ್ಲಿ ಯಾವ ಜೀವಿಗೆ ಯಾವ ಜಾಣ್ಮೆಯಿದೆಯೋ ತಿಳಿದುಕೊಳ್ಳುವ ಕುತೂಹಲ, ವ್ಯವಧಾನ, ಸಮಯ ನಮಗಿರಬೇಕಲ್ಲವೇ ಸಖೀ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಬಳ
Next post ಬಿಂದು

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys