ಬನ್ನಿ ಓ ತಾರೆಗಳೆ!

ಬನ್ನಿ ಓ ತಾರೆಗಳೆ ನೆಲಕಿಳಿದು ಬನ್ನಿ
ಆಗಸದ ಕಾಂತಿಯನು ಭೂಮಿಗೂ ತನ್ನಿ,
ಕೋಟಿ ಮೈಲಿಗಳಾಚೆ ಹೊಳೆವ ತೇಜಗಳೆ
ಬಂದು ನಮ್ಮನು ಹರಸಿ ಕಾಂತಿಗೋಳಗಳೆ.

ಸೂರ್ಯ ಚಂದಿರ ಮುಗಿಲ ಜೊತೆ ಬಾಳುವವರೆ
ಗಾಳಿ ಉಯ್ಯಾಲೆಯಲಿ ತೂಗಿಕೊಳುವವರೆ,
ಎಂದೂ ಆರದೆ ಉರಿವ ನಂದಾದೀಪಗಳೆ
ನಮ್ಮ ಜೊತೆ ಆಡಿರಿ ಒಂದೆರಡು ಗಳಿಗೆ.

ನಿಮ್ಮ ಬಾಳಿನೊಳಿದೆ ಸ್ವರ್ಗೀಯ ಕಾಂತಿ
ಪ್ರೇಮ ಶುಭ್ರತೆ ದೇವ ಸನ್ನಿಧಿಯ ಶಾಂತಿ,
ಇಲ್ಲಿಗೂ ತನ್ನಿರಿ ನಿಮ್ಮ ಸಂಪತ್ತು
ತಂದು ಹೆಚ್ಚಿಸಿ ನಮ್ಮ ಲೋಕದಂತಸ್ತು.

ಮೀಯಿಸಿರಿ ನಿಮ್ಮ ಬೆಳಕಿಂದ ಭೂಮಿಯನು
ಹಾಯಿಸಿರಿ ಜಗದೆದೆಗೆ ಕರುಣೆ ಪ್ರೇಮವನು,
ಪ್ರಾಣಿ ಪರಿಸರ ಎಲ್ಲ ಕ್ಷೇಮದಲಿ ಬಾಳಿ
ನಲಿವೆ ನಂದನ ಆಗಲೆಮ್ಮ ಈ ಭೂಮಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೯೭
Next post ಪ್ರಶಸ್ತಿ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys