ಪಂಪನಿಗೆ

ಮೃದು ಪವನ ಪರಿಮಳದ ಅರಿಕೆಗೆಚ್ಚರಗೊಳಲಿ
ಸುಮವೀಣೆ! ಆ ವೀಣೆಯಿಂಚರದ ಕನಸಿನಲಿ
ತೆರೆತೆರೆ ತೆರೆಯಲೊಂದು ರೂಪಕ ಸರೋವರಂ!
ಅಲ್ಲುಲಿವ ರಾಜಹಂಸಗಳ ಪಲ್ಲವಿ ‘ಪಂಪಂ’!

ಪಂಪ, ನಿನ್ನಿಂಪಿನಚ್ಚರಿಯ ನುಡಿವೆಳಗಿನಿಂ-
ದರಳ್ವ ಮಲ್ಲಿಗೆ ಮಾವು ಕರ್ಬು ಗಿಳಿ ತುಂಬಿಗಳ
ಜಲ್ಲೆನುವ ಜಲವ ಕಾಡಿನ ಸೊರ್ಕಿದಾನೆಗಳ
ಬನವಾಸಿಬಳಗದೊಲ್ಮೆಯ ನಿನ್ನ ಸ್ಮಾರಕಂ!

ಕಾದದೆ ಇಳೆಯ ಕುಡದ ಕೌರವೇಂದ್ರನ ಚಲಂ,
ಚಲಂ ಕುಲಂ ಎಂಬ ವೀರಕರ್ಣಾಮೃತಂ,
ಚಕ್ರಮಂ ಪಿಡಿಯೆನೆಂಬಾ ಚಕ್ರಿ ಚಕ್ರಮಂ
ತುಡುಕುನಂತಾಗಿಸಿದ ಗಾಂಗೇಯಪೌರುಷಂ,-

ಲೋಕೋತ್ತರಂ ನಿನ್ನ ಲೌಕಿಕಂ. ಅಮೇಯಂ
ಚಿರಂ ಸ್ಥಿರಂ ನಿನ್ನ ವಿಕ್ರಮಂ, ವಿಜಯಂ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಜಾಸನದ ಕಟ್ಟೆಯ ಮೇಗಲಿ
ಚಿತ್ರ: ಪ್ರಮೋದ್ ಪಿ ಟಿ Next post ಗಣೇಶ ಬಂದ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys