ಮೂಲಧಾತು ಒಂದೇ

ಪ್ರಿಯ ಸಖಿ,

ಇವನೊಬ್ಬ ಬೊಂಬೆ ಮಾರುವವನು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ವಿವಿಧ ರೀತಿಯ ಬೊಂಬೆಗಳನ್ನು ಬಿದಿರಿನ ದೊಡ್ಡ ಬುಟ್ಟಿಯಲ್ಲಿ ಹೊತ್ತುಕೊಂಡು ಅವನು ಬೀದಿ ಬೀದಿಗಳಲ್ಲಿ ತಿರುಗಿ ವ್ಯಾಪಾರ ಮಾಡುತ್ತಾನೆ. ಒಂದೊಂದು ಬೊಂಬೆಗೂ ಬೇರೆ ಬೇರೆ ಬೆಲೆ. ಹಾಗೇ ಬೊಂಬೆಗಳೂ ವಿಭಿನ್ನ ಆಕಾರ, ರೂಪ ಪಡೆದಿವೆ.

ಇವನ ಬುಟ್ಟಿಯಲ್ಲಿ ಎಲ್ಲ ಬೊಂಬೆಯೂ ಉಂಟು. ಗಣಪತಿ, ಕೃಷ್ಣ-ರಾಧೆ, ಶಿವ-ಪಾರ್ವತಿ, ವಿವೇಕಾನಂದ, ಗಾಂಧೀಜಿ, ಏಸುಕ್ರಿಸ್ತ, ನವಿಲು, ಡುಮ್ಮ-ಡುಮ್ಮಿ, ಗಿಣಿಗಳು, ಅಳುವ ಮಗು, ಬಸವಣ್ಣ, ಗಾಂಧೀಜಿಯವರ ತತ್ವ ಸಾರುವ ಮೂರು ಕೋತಿಗಳು…. ಒಂದೆ, ಎರಡೇ ಇವನ ಬುಟ್ಟಿ ಎಂದರೆ ಒಂದು ಮಿನಿ ಭಾರತವಿದ್ದಂತೆ! ಅದರೊಳಗೆ ಎಷ್ಟೊಂದು ಬಣ್ಣದ ವಿಭಿನ್ನ ರೀತಿಯ ಬೊಂಬೆಗಳು! ಒಂದೊಂದು ಬೊಂಬೆಗೂ ಅದರದ್ದೇ ಆದ ಮಹತ್ವ, ತತ್ವ, ಅದರದ್ದೇ ವಿಭಿನ್ನ ರೂಪು, ಚಾಪು. ಬೊಂಬೆಗೆ ಬಳಿದ ಬಣ್ಣಗಳೂ ಬೇರೆ ಬೇರೆ. ಆದರೆ ಎಲ್ಲಾ ಬೊಂಬೆಗಳನ್ನು ತಯಾರಿಸಲು ಉಪಯೋಗಿಸಿದ ಮೂಲವಸ್ತು ಮಾತ್ರ ಒಂದೇ!

ಸಖಿ, ಒಮ್ಮೆ ಆ ಬೊಂಬೆಗಳಿಗೆ ಮಾನವರನ್ನು ಹೋಲಿಸಿ ನೋಡಿಕೊಂಡರೆ, ಹೇಗೆ? ಆ ಬೊಂಬೆಗಳಂತೆಯೇ ನಮ್ಮೆಲ್ಲರ ಹುಟ್ಟಿನ ಮೂಲಧಾತು ಒಂದೇ. ಅದೇ ರಕ್ತ ಮಾಂಸ ಜೀವ… ಇತ್ಯಾದಿಗಳಲ್ಲಿ ಯಾವ ವ್ಯತ್ಯಾಸವೂ ಇಲ್ಲ. ಹುಟ್ಟಿಗೆ ಮೊದಲೇ ಮಗುವಿನ ಜಾತಿಯನ್ನು ಗುರುತಿಸುವ ಯಾವ ಸಂಕೇತವನ್ನೂ ಮಗುವಿನಲ್ಲಿ ನಾವು ಕಾಣುವುದಿಲ್ಲ. ಆದರೆ ಮಗು ಹುಟ್ಟಿದೊಡನೆ, ಹುಟ್ಟಿದ ಮನೆಯ ಜಾತಿ, ಭಾಷೆ, ಸಂಸ್ಕಾರ, ಆಚಾರ ವಿಚಾರಗಳಿಗೆ ತಕ್ಕಂತೆ ಮಗುವಿನ ಪರಿಸರವೂ ನಿರ್ಮಾಣವಾಗುತ್ತದೆ. ಮುಸಲ್ಮಾನರ ಮನೆಯಲ್ಲಿ ಹುಟ್ಟಿದ ಜೀವ ಮುಸ್ಲೀಮನಾಗುತ್ತದೆ. ಹಿಂದುವಿನ ಮನೆಯಲ್ಲಿ ಹುಟ್ಟಿದ ಜೀವ ಹಿಂದುವಾಗುತ್ತದೆ. ಹಾಗೇ ಇನ್ನಿತರ ಜಾತಿಗಳಲ್ಲಿ ಹುಟ್ಟಿದ ಜೀವವೂ ಕೂಡ.  ಆದರೆ ವಿಶಾಲಾರ್ಥದಲ್ಲಿ ವಿವೇಚಿಸಿದರೆ ನಾವಲ್ಲರೂ ಒಂದೇ!

ಈ ಸರಳ ತತ್ವವನ್ನೇ ಸಂಕುಚಿತಗೊಳಿಸಿರುವ ನಾವು ಮೇಲು-ಕೀಳು, ಶ್ರೇಷ್ಠ-ನೀಚ ಎಂದೆಲ್ಲಾ ಕಿತ್ತಾಡಿ ಹೊಡೆದಾಡುತ್ತೇವೆ. ನಮ್ಮ ಬಣ್ಣ, ರೂಪ, ಆಚಾರ, ವಿಚಾರ, ವೇಷಭೂಷಣ, ಬುದ್ಧಿ, ವಿವೇಕ ಎಲ್ಲವೂ ವಿಭಿನ್ನವಾಗಿಯೇ ಇರಬಹುದು- ಆದರೆ ಬೊಂಬೆಗೆ ಮೂಲವಸ್ತು ಒಂದೇ ಇದ್ದಂತೆ, ನಮ್ಮೆಲ್ಲರ ಹುಟ್ಟಿಗೆ ಕಾರಣವಾಗಿರುವ ಮೂಲಧಾತು ಒಂದೇ! ಇವನ್ನೆಂದೂ ನಾವು ಮರೆಯಬಾರದು. ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಶಿ
Next post ಆನಂದ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

cheap jordans|wholesale air max|wholesale jordans|wholesale jewelry|wholesale jerseys