ಮಗುವೊಂದು ವ್ಯಕ್ತಿ

ಮಗುವೊಂದು ವ್ಯಕ್ತಿ

Tande Maguಪ್ರಿಯ ಸಖಿ,

ಮಗುವಿಗೆ  ಏನು ತಿಳಿಯುತ್ತದೆ? ಅದು ನಾವು ಹೇಳಿಕೊಟ್ಟಂತೆ ಕಲಿಯುತ್ತಾ ಹೋಗುತ್ತದೆ. ಅದಕ್ಕೆ ತನ್ನದೇ ಆದ ವ್ಯಕ್ತಿತ್ವವೆಂಬುದಿರುವುದಿಲ್ಲ ಎಂಬುದು ನಮ್ಮ ಸಾಮಾನ್ಯ ಅಭಿಪ್ರಾಯ. ಅದರೆ ಬಹುಸೂಕ್ಷ್ಮವಾಗಿ ಮಗುವೊಂದನ್ನು ಗಮನಿಸಿದರೆ ಈ ನಮ್ಮ ಅಭಿಪ್ರಾಯ ತಪ್ಪೆಂದು ಸಾಬೀತಾಗುತ್ತದೆ.

ಮಕ್ಕಳ ಮನಸ್ಸೊಂದು ಕಪ್ಪು ಹಲಗೆಯಂತೆ. ಇಲ್ಲಿ ನಾವು ಏನನ್ನು ಬೇಕಾದರೂ ಬರೆಯಬಹುದು ಎಂಬುದು ಪಾಶ್ಚಾತ್ಯ ಅಭಿಪ್ರಾಯ. ಆದರೆ ಇತ್ತೀಚೆಗೆ ನಾವೂ ಇದನ್ನೇ ನಂಬುತ್ತೇವೆ. ಭಾರತೀಯ ಸಂಸ್ಕೃತಿಯ ಪ್ರಕಾರ ಪ್ರತಿಯೊಂದು ಮಗುವೂ ಒಂದು ವ್ಯಕ್ತಿ. ಇಲ್ಲಿ ಪ್ರತಿಯೊಬ್ಬನಲ್ಲೂ ಇರುವ ಆತ್ಮವನ್ನು ಗೌರವಿಸಿ ಮಗುವೂ ಒಂದು ವ್ಯಕ್ತಿ ಎಂದು ನಂಬಲಾಗುತ್ತದೆ.

ಮಗುವಿನ ಮನಸ್ಸು ಕಪ್ಪು ಹಲಗೆ, ನಾವೇ ಅದಕ್ಕೆ ಎಲ್ಲವನ್ನೂ ಹೇಳಿಕೊಡುತ್ತೇವೆನ್ನುವುದು ತಪ್ಪಾಗುತ್ತದೆ. ತನಗೆ ಹಸಿವಾದಾಗ ಅಳುವುದನ್ನೂ, ಹೊಸ ಆಟಿಕೆಯೊಂದು ಕೈಗೆ ಸಿಕ್ಕಾಗ ಸಂತಸದಿಂದ ನಗುವುದನ್ನೂ, ತಾಯಿಯನ್ನ ಕಂಡೊಡನೆ ಬೇರೆಯವರ ಕೈಯಿಂದ ಜಿಗಿದು ತಾಯಿಯನ್ನು ಅಪ್ಪುವುದನ್ನು ತನಗೆ ಬೇಕೆಂದ ವಸ್ತು ಸಿಗದಿದ್ದಾಗ ಸಿಟ್ಟುಗೊಳ್ಳುವುದನ್ನೂ ಮಗುವಿಗೆ ಹುಟ್ಟಿದೊಡನೆ ಯಾರು ಕಲಿಸಿದ್ದಾರೆ ?

ನಾವು ಏನನ್ನೇ ಹೊರಗಿನಿಂದ ಕಲಿಸಿದರೂ ಅದನ್ನು ಗ್ರಹಿಸುವ ಶಕ್ತಿ, ತಿಳಿದುಕೊಳ್ಳುವ, ಅರ್ಥೈಸಿಕೊಳ್ಳುವ ಮನಸ್ಸು ಮಗುವಿನಲ್ಲಿ ಹುಟ್ಟಿನಿಂದಲೇ ಇದೆ. ತಾನು ಬೆಳೆಯುತ್ತಾ ತನ್ನ ಸುತ್ತಲಿನ ಪರಿಸರವನ್ನು ಮಗು ತನ್ನ ದೃಷ್ಟಿಕೋನದಂತೆಯೇ ಅರ್ಥೈಸುತ್ತಾ ಹೋಗುತ್ತದೆ. ಪುಟ್ಟ ಮಗುವಿಗೂ ತನ್ನದೇ ಇಷ್ಟಾನಿಷ್ಟಗಳೂ, ನಿಲುವುಗಳು ಇರುವುದನ್ನು ಗಮನಿಸಬಹುದು. ಅದನ್ನು ಗುರುತಿಸುವ ಮನೋಭಾವ ನಮ್ಮಲ್ಲಿ ಮೂಡಬೇಕಷ್ಟೇ.

ಪ್ರತಿಯೊಂದು ಮಗುವಿಗೂ ಹಿರಿಯರಂತೆಯೇ ಎಲ್ಲ ಸನ್ನಿವೇಶಗಳಿಗೂ ಸ್ಪಂದಿಸಿ ಮೂಡುವ ಸಂವೇದನೆಗಳಿವೆ. ಅವುಗಳಿಗೆ ನಾವು ಬೆಲೆಕೊಡಬೇಕು. ಹಾಗೂ ಅವುಗಳನ್ನು ಗೌರವಿಸಬೇಕು. ಅದು ಬಿಟ್ಟು ನಮ್ಮ ಅನಿಸಿಕೆ, ಅಭಿಪ್ರಾಯಗಳನ್ನೆಲ್ಲ ಮಗುವಿನ ಮೇಲೆ ಬಲವಂತವಾಗಿ ಹೇರುವುದರಿಂದ ಮಗುವಿನ ಸೂಕ್ಷ್ಮಸಂವೇದನೆಗಳು ಘಾಸಿಗೊಂಡು, ದೊಡ್ಡದಾದಂತೆಲ್ಲ ಸ್ವತಂತ್ರ ವ್ಯಕ್ತಿತ್ವವಿಲ್ಲದೇ, ಕೀಳರಿಮೆಯಿಂದ, ಮನೋವೇದನೆಯಿಂದ ನರಳುವಂತಾಗುತ್ತದೆ ಎನ್ನುತ್ತಾರೆ ಮಕ್ಕಳ ಮಾನಸಿಕ ತಜ್ಞರು.

ಸಖಿ, ಪ್ರತಿಯೊಂದು ಮಗುವೂ ತನ್ನ ಭಾವನೆಗಳಿಂದ ತನ್ನಂತೆಯೇ ತಾನೇ ವಿಕಸಿಸಿ, ಅರಳಲು, ಪರಿಮಳ ಸೂಸಲು ಬಿಡಬೇಕು. ಅದಕ್ಕೆ ತನ್ನ ಪೂರಕ ಪರಿಸರವನ್ನೇ ಹಿರಿಯರು ಪೂರೈಸಿಕೊಡಬೇಕು. ಮಗುವೂ ಒಂದು ವ್ಯಕ್ತಿ. ಅದು ನಾವು ತುಂಬಿದ ವಿಷಯಗಳನ್ನೇ ಕಕ್ಕುವ ಕಂಪ್ಯೂಟರ್ ಅಲ್ಲ ಎಂಬುವುದನ್ನು ನಾವು ತಿಳಿದಿರಬೇಕು. ಮಗುವಿನ ಮನಸ್ಸೊಂದು ವಿಶಾಲ ವಿಶ್ವವಿದ್ದಂತೆ. ಅದು ತನಗೆ ಬೇಕೆಂದೆಡೆ ಹಾರಿ, ಬೇಕೆನಿಸಿದ್ದನ್ನು ಪಡಯಬಲ್ಲದು. ಮಗುವನ್ನು ನಮ್ಮ ಮಿತಿಯಲ್ಲಿಯಷ್ಟೇ ಅರ್ಧೈಸಿಕೊಂಡು ಅದಕ್ಕೆ ಸಂಕೋಲೆಯನ್ನು ತೊಡಿಸುವುದು ಬೇಡ. ಅಲ್ಲವೇ ಸಖಿ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಣಬೇಕಿಲ್ಲ
Next post ದ್ವಂದ್ವ

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys