ಧನಾತ್ಮಕ ನಿಲುವು

ಪ್ರಿಯ ಸಖಿ,

ಬ್ರಿಟೀಷರೊಡನೆ ಭಾರತದ ಪರವಾಗಿ ವಾದ ಮಾಡಿ ಸ್ವಾತಂತ್ರ್ಯ ಪಡೆಯಲೆಂದು ದುಂಡು ಮೇಜಿನ ಗೋಷ್ಠಿಗಾಗಿ ಗಾಂಧೀಜಿ, ಹಡಗಿನಲ್ಲಿ ಅವರ ನಾಡಿಗೆ ಹೊರಟಾಗ, ಅವರ ಜೊತೆಗೆ ಹಡಗಿನಲ್ಲಿದ್ದ ಕೆಲವು ಬ್ರಿಟೀಷ್ ಜನರು ಗಾಂಧೀಜಿಯೊಡನೆ ಬೆಳಗು ರಾತ್ರಿ ಚರ್ಚಿಸುತ್ತಿದ್ದರು. ನಾವು ಭಾರತವನ್ನು ಬಿಟ್ಟು ಹೋದರೆ ಭಾರತಕ್ಕೆ ದುರ್ಗತಿ ತಪ್ಪಿದ್ದಲ್ಲ. ಆದ್ದರಿಂದ ನಾವು ನಿಮ್ಮನ್ನು ಆಳುವುದೇ ಕ್ಷೇಮ ಇತ್ಯಾದಿ ಮಾತನಾಡುತ್ತಿದ್ದರು. ಗಾಂಧೀಜಿಯವರೂ ನಮ್ಮ ದೇಶದ ಪರವಾಗಿ ನಿರಂತರವಾಗಿ ವಾದ ಮಾಡುತ್ತಿದ್ದರು.

ಕೊನೆಗೊಮ್ಮೆ ತಮ್ಮ ಪರವಾದವನ್ನೆಲ್ಲಾ ೪-೫ ಪುಟಗಳಷ್ಟು ನೋಟ್ಸ್‌ ಬರೆದು ಅದಕ್ಕೊಂದು ಗುಂಡುಸೂಜಿ ಚುಚ್ಚಿ ಆ ಆಂಗ್ಲ ಜನರು ಗಾಂಧೀಜಿಗೆ ನೀಡಿ ನಮ್ಮ
ವಾದವನ್ನೆಲ್ಲಾ ಇದರಲ್ಲಿ ಮಂಡಿಸಿದ್ದೇವೆ. ನಿಮಗೆ ಇದರಿಂದ ನಮ್ಮ ನಿಲುವು ಸ್ಪಷ್ಟವಾಗಬಹುದು. ಹಾಗೇ ಅದರಿಂದ ನಿಮ್ಮ ಮನಪರಿವರ್ತನೆಯಾಗಲು ಉಪಯೋಗ
ವಾಗಬಹುದು ಎಂದರು.

ಗಾಂಧೀಜಿ ಆ ನೋಟ್ಸನ್ನು ತೆಗೆದುಕೊಂಡರು. ಮಾರನೆಯ ದಿನ ಅವರಿದ್ದಲ್ಲಿಗೆ ಆಗಮಿಸಿದ ಆಂಗ್ಲರು ನಮ್ಮ ನೋಟ್ಸ್‌ ಓದಿದಿರಾ? ಎಂದರು. ಗಾಂಧೀಜಿ ಓದಿದೆ ಎಂದರು. ಅದಕ್ಕವರು ಹಾಗಿದ್ದರೆ ಅದರಲ್ಲಿ ನಿಮಗೆ ಏನಾದರೂ ಬೆಲೆಯುಳ್ಳದ್ದು ಇದೆ ಎನಿಸಿತೇ? ಎಂದು ಕೇಳಿದರು. ನಾನಾಗಲೇ ಬೆಲೆಯುಳ್ಳದ್ದನ್ನು  ತೆಗೆದಿರಿಸಿಕೊಂಡಿದ್ದೇನೆ ಎಂದು ಆ ನೋಟ್ಸಿಗೆ ಚುಚ್ಚಿದ್ದ ಹೊಸ ಗುಂಡು ಸೂಜಿಯನ್ನು ತೋರಿಸಿ ನಕ್ಕರು ಗಾಂಧೀಜಿ.

ಈ ಒಂದು ಪ್ರಸಂಗದಿಂದ ಗಾಂಧೀಜಿಯವರು ಎಷ್ಟೊಂದು ನಿಷ್ಟುರವಾದಿಗಳೂ, ದೇಶಪ್ರೇಮಿಗಳೂ ಆಗಿದ್ದರು ಎಂದು ತಿಳಿಯುವ ಹಾಗೆ ತಮಗೆ ಇಷ್ಟವಿಲ್ಲವೆನಿಸಿದ
ಸಂಗತಿಗಳಿಂದಲೂ ತಮಗೆ ಉಪಯೋಗಿಯಾಗುವಂತಹುದನ್ನು ತೆಗೆದುಕೊಳ್ಳುವ ಧನಾತ್ಮಕ ನಿಲುವು (Positive thinking) ಹೊಂದಿದ್ದರು ಎಂಬುದು ಸ್ಪಷ್ಟವಾಗುತ್ತದೆ.

ಸಖಿ, ನಮ್ಮ ಬದುಕಿನಲ್ಲೂ ನಮಗೆ ಬೇಡವಾದ ಎಷ್ಟೊಂದು ಸಂಗತಿಗಳು ನಡೆಯುತ್ತಿರುತ್ತವೆ. ಬೇಡದ ವ್ಯಕ್ತಿಗಳೊಂದಿಗೆ ವ್ಯವಹರಿಸಬೇಕಾಗುತ್ತದೆ. ಆಗೆಲ್ಲಾ ಮನಸ್ಸು ಕಹಿಯಾಗುತ್ತದೆ.  ಅದರೆ ಅಂತಹ ಕೆಡುಕಿನಲ್ಲೂ ಒಳಿತನ್ನು, ಧನಾತ್ಮಕ ನಿಲುವನ್ನು ನಾವು ಬೆಳೆಸಿಕೊಂಡರೆ ನಿಜಕ್ಕೂ ಬದುಕು ಸುಂದರವಾಗುತ್ತದೆ. ಕೆಟ್ಟದ್ದರಲ್ಲಿಯೂ ನಮಗೆ ಉಪಯೋಗವಾಗಬಲ್ಲ ಒಳಿತನ್ನು ಆರಿಸಿಕೊಳ್ಳುವುದೇ ನಿಜವಾದ ಜಾಣತನವಲ್ಲವೆ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಂಚಾಮೃತ
Next post ದೇಶಾವರಿ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys